ಪಡುಬಿದ್ರಿ: ಹೆದ್ದಾರಿಯಲ್ಲೇ ನಿಲ್ಲಿಸಿದ ಬಸ್ ಹಿಂಬದಿಗೆ ಕಾರು ಢಿಕ್ಕಿ , ಮಹಿಳೆಗೆ ತೀವ್ರ ಗಾಯ – vishwanews24
ಪಡುಬಿದ್ರಿ: ಯಾವುದೇ ಮುನ್ಸೂಚನೆ ಇಲ್ಲದೆ ಹೆದ್ದಾರಿಯಲ್ಲೇ ನಿಲ್ಲಿಸಿದ ಬಸ್ ಹಿಂಬದಿಗೆ ಕಾರು ಢಿಕ್ಕಿ , ಮಹಿಳೆಗೆ ತೀವ್ರ ಗಾಯ
ಪಡುಬಿದ್ರಿ: ಸರ್ವಿಸ್ ರಸ್ತೆಗಿಳಿಯದೇ ಹೆದ್ದಾರಿಯನ್ನೇ ಬಳಸಿ ಸಾಗುವ ಚಾಳಿ ಬಸ್ಗಳಲ್ಲಿ ಪಡುಬಿದ್ರಿಯಲ್ಲಿ ಸತತವಾಗಿ ಮುಂದುವರಿದಿದ್ದು, ಇದರಿಂದಾಗಿ ಶುಕ್ರವಾರ ಸಂಜೆಯ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಕಾರೊಂದು ಬಸ್ ಹಿಂಬದಿಗೆ ಢಿಕ್ಕಿಯಾಗಿ ಮಂಗಳೂರು ಮಂಗಳಾದೇವಿ ಪರಿಸರದ ಮಹಿಳೆ ಪುಷ್ಪಲತಾ ಆಚಾರ್ಯ (56) ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ ಇಲ್ಲದೇ ನಿಲ್ಲಿಸಿದ ಪರಿಣಾಮವಾಗಿ ಅದರ ಹಿಂದಿನಿಂದ ಹೆದ್ದಾರಿಯಲ್ಲೇ ಬಂದಿದ್ದ ಕಾರೊಂದು ಬಸ್ ಹಿಂಬದಿಗೆ ಢಿಕ್ಕಿಯಾಗಿದೆ.
ಕಾಪು ಬಿಜೆಪಿ ವತಿಯಿಂದ ವೀರಭದ್ರ ಸಭಾಂಗಣದಲ್ಲಿ ಯೋಗ ದಿನಾಚರಣೆ ಆಚರಣೆ – vishwanews24
ಇದೇ ಕಾರಲ್ಲಿ ಮಂಗಳೂರಿನಿಂದ ಉಡುಪಿಯತ್ತ ಹೋಗುತ್ತಿದ್ದ ತಾಯಿ, ಮಗಳು ಹಾಗೂ ಸಂಬಂಧಿಯೋರ್ವರ ಸಹಿತ ಮೂರು ಮಂದಿ ಇದ್ದು ಮುಂದಿನ ಸಾಲಿನಲ್ಲಿ ಚಾಲಕನ ಬದಿಯಲ್ಲೇ ಕುಳಿತಿದ್ದ ಪುಷ್ಪಲತಾ ಅವರ ಕಾಲುಗಳಿಗೆ, ಕೈಗೆ ಹಾಗೂ ಮೂಗಿಗೆ ಗಂಭೀರ ಗಾಯಗಳಾಗಿದ್ದು ಪಡುಬಿದ್ರಿಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪಡುಬಿದ್ರಿ ಪೊಲೀಸರು ಅಪಘಾತ ಸಂಭವಿಸಿದ ತಾಣಕ್ಕೆ ಭೇಟಿಯಿತ್ತಿದ್ದಾರೆ.
ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ : ಡಿ.ಕೆ. ಶಿ – vishwanews24
