ಪಡುಬಿದ್ರಿ: ಸರ್ವಿಸ್ ರಸ್ತೆಗಿಳಿಯದೇ ಹೆದ್ದಾರಿಯನ್ನೇ ಬಳಸಿ ಸಾಗುವ ಚಾಳಿ ಬಸ್ಗಳಲ್ಲಿ ಪಡುಬಿದ್ರಿಯಲ್ಲಿ ಸತತವಾಗಿ ಮುಂದುವರಿದಿದ್ದು, ಇದರಿಂದಾಗಿ ಶುಕ್ರವಾರ ಸಂಜೆಯ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಕಾರೊಂದು ಬಸ್ ಹಿಂಬದಿಗೆ ಢಿಕ್ಕಿಯಾಗಿ ಮಂಗಳೂರು ಮಂಗಳಾದೇವಿ ಪರಿಸರದ ಮಹಿಳೆ ಪುಷ್ಪಲತಾ ಆಚಾರ್ಯ (56) ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ ಇಲ್ಲದೇ ನಿಲ್ಲಿಸಿದ ಪರಿಣಾಮವಾಗಿ ಅದರ ಹಿಂದಿನಿಂದ ಹೆದ್ದಾರಿಯಲ್ಲೇ ಬಂದಿದ್ದ ಕಾರೊಂದು ಬಸ್ ಹಿಂಬದಿಗೆ ಢಿಕ್ಕಿಯಾಗಿದೆ.
ಇದೇ ಕಾರಲ್ಲಿ ಮಂಗಳೂರಿನಿಂದ ಉಡುಪಿಯತ್ತ ಹೋಗುತ್ತಿದ್ದ ತಾಯಿ, ಮಗಳು ಹಾಗೂ ಸಂಬಂಧಿಯೋರ್ವರ ಸಹಿತ ಮೂರು ಮಂದಿ ಇದ್ದು ಮುಂದಿನ ಸಾಲಿನಲ್ಲಿ ಚಾಲಕನ ಬದಿಯಲ್ಲೇ ಕುಳಿತಿದ್ದ ಪುಷ್ಪಲತಾ ಅವರ ಕಾಲುಗಳಿಗೆ, ಕೈಗೆ ಹಾಗೂ ಮೂಗಿಗೆ ಗಂಭೀರ ಗಾಯಗಳಾಗಿದ್ದು ಪಡುಬಿದ್ರಿಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪಡುಬಿದ್ರಿ ಪೊಲೀಸರು ಅಪಘಾತ ಸಂಭವಿಸಿದ ತಾಣಕ್ಕೆ ಭೇಟಿಯಿತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…