ಪಡುಬಿದ್ರಿ: ಉಚ್ಚಿಲ ಭಾಸ್ಕರನಗರದಲ್ಲಿ ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ಮೊಹಮ್ಮದ್ ಶಿನಾಲ್ ಎಂಬ ಯುವಕನನ್ನು ಕಾರಿನಲ್ಲಿ ಬಂದ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೊಹಮ್ಮದ್ ಶಿನಾಲ್ನನ್ನು ಆರೋಪಿಗಳಾದ ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ ಹಾಗೂ ಇತರ ಇಬ್ಬರು ಕಾರಿನಲ್ಲಿ ಬಂದು ಉಚ್ಚಿಲದಲ್ಲಿರುವ ಬೆಳಪು ಸೊಸೈಟಿ ಬಳಿ ತಡೆದು ನಿಲ್ಲಿಸಿ ಮೊಬೈಲ್ ಅನ್ನು ಕಸಿದು ಕಾರಿನಲ್ಲಿ ಕುಳ್ಳಿರಿಸಲು ಯತ್ನಿಸಿದ್ದರು. ಈ ವೇಳೆ ಮೊಹಮ್ಮದ್ ಶಿನಾಲ್ ತನ್ನ ಮೊಬೈಲ್ ಅನ್ನು ಎಳೆದು ತಪ್ಪಿಸಿಕೊಂಡು ತೆರಳಿದ್ದು, ಆರೋಪಿಗಳು ಅಲ್ಲಿಗೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಅಲ್ಲಿಗೆ ಬೈಕಿನಲ್ಲಿ ಬಂದಿದ್ದ ಇನ್ನೋರ್ವ ಆರೋಪಿ ಆಡನ್ ಕೂಡ ಸೇರಿಕೊಂಡಿದ್ದ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಾಗ ಆಡನ್ ಪರಾರಿಯಾಗಿದ್ದು ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರು ಓಡಿ ಹೋಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…