ಪಡುಬಿದ್ರಿ: ಉಚ್ಚಿಲ ಭಾಸ್ಕರನಗರದಲ್ಲಿ ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ಮೊಹಮ್ಮದ್ ಶಿನಾಲ್ ಎಂಬ ಯುವಕನನ್ನು ಕಾರಿನಲ್ಲಿ ಬಂದ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೊಹಮ್ಮದ್ ಶಿನಾಲ್ನನ್ನು ಆರೋಪಿಗಳಾದ ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ ಹಾಗೂ ಇತರ ಇಬ್ಬರು ಕಾರಿನಲ್ಲಿ ಬಂದು ಉಚ್ಚಿಲದಲ್ಲಿರುವ ಬೆಳಪು ಸೊಸೈಟಿ ಬಳಿ ತಡೆದು ನಿಲ್ಲಿಸಿ ಮೊಬೈಲ್ ಅನ್ನು ಕಸಿದು ಕಾರಿನಲ್ಲಿ ಕುಳ್ಳಿರಿಸಲು ಯತ್ನಿಸಿದ್ದರು. ಈ ವೇಳೆ ಮೊಹಮ್ಮದ್ ಶಿನಾಲ್ ತನ್ನ ಮೊಬೈಲ್ ಅನ್ನು ಎಳೆದು ತಪ್ಪಿಸಿಕೊಂಡು ತೆರಳಿದ್ದು, ಆರೋಪಿಗಳು ಅಲ್ಲಿಗೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಅಲ್ಲಿಗೆ ಬೈಕಿನಲ್ಲಿ ಬಂದಿದ್ದ ಇನ್ನೋರ್ವ ಆರೋಪಿ ಆಡನ್ ಕೂಡ ಸೇರಿಕೊಂಡಿದ್ದ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಾಗ ಆಡನ್ ಪರಾರಿಯಾಗಿದ್ದು ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರು ಓಡಿ ಹೋಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…