ಪಡುಬಿದ್ರಿ: ಐಸಿಇಸಿ ಪರಿಸರ ತಜ್ಞರ ಸಮಿತಿ ಮಂಗಳವಾರ ಯುಪಿಸಿಎಲ್ ಯೋಜನಾ ಪ್ರದೇಶ ವ್ಯಾಪ್ತಿಯ ಪರಿಸರ ಹಾನಿಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಅಲ್ಲಿನ ಅಂತರ್ಜಲ ಮತ್ತು ಉಪ್ಪು ನೀರಿನ ಸಮಸ್ಯೆ , ಕುಂಠಿತವಾಗಿರುವ ಕೃಷಿ, ತೋಟಗಾರಿಕೆ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳನ್ನು ತಂಡ ಪರಿಶೀಲಿಸಿತು.
ಡಾ.ಕೃಷ್ಣರಾಜ್, ಡಾ.ಶ್ರೀಕಾಂತ್, ಕೇಂದ್ರೀಯ ಪರಿಸರ ನಿಯಂತ್ರಣ ಮಂಡಳಿ ಬೆಂಗಳೂರು ಇದರ ಜಂಟಿ ನಿರ್ದೇಶಕ ತಿರುಮೂರ್ತಿ ನೇತೃತ್ವದ ಪರಿಸರ ತಜ್ಞರ ಸಮಿತಿ ಮಂಗಳವಾರ ಯುಪಿಸಿಎಲ್ ಯೋಜನಾ ಪ್ರದೇಶ ವ್ಯಾಪ್ತಿಯ ಪರಿಸರ ಹಾನಿಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಊಳ್ಳೂರರಿನ ಜಗನ್ನಾಥ ಮೂಲ್ಯ ಹಾಗು ಎಲ್ಲೂರಿನ ಜಯಂತ್ ರಾವ್, ಗಣೇಶ್ ರಾವ್ ಅವರ ಕೃಷಿ ಭೂಮಿಗೆ ತೆರಳಿ ಪರಿಶೀಲನೆ ನಡೆಸಿತು. ಅಲ್ಲಿನ ಅಂತರ್ಜಲ ಮತ್ತು ಉಪ್ಪು ನೀರಿನ ಸಮಸ್ಯೆ, ಕುಂಠಿತವಾಗಿರುವ ಕೃಷಿ ಹಾಗು ತೋಟಗಾರಿಕಾ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ತಂಡವು ಪರಿಶೀಲಿಸಿತು.
ಮುದರಂಗಡಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಜನರ ಆರೋಗ್ಯದ ಕುರಿತಾದ ಮಾಹಿತಿ ಸಂಗ್ರಸಿದರು.
ಯುಪಿಸಿಎಲ್ ನಿಂದ ಉಂಟಾಗಿರುವ ಪರಿಸರ, ನೀರಿನ ಸಮಸ್ಯೆ, ಆರೋಗ್ಯದ ಸಮಸ್ಯೆಗಳನ್ನು ಪರಿಶೀಲಿಸಿ ಕೇಂದ್ರೀಯ ಹಸಿರು ಪೀಠಕ್ಕೆ ಈ ತಂಡ ಜನವರಿ ಅಂತ್ಯದೊಳಗೆ ವರದಿ ನೀಡಬೇಕಿದ್ದು, ಸಮಸ್ಯೆಯ ಆಳವನ್ನು ಅರಿತ ತಜ್ಞರ ತಂಡ ದಿನದ ವಿಸ್ತರಣೆಯಾಗಿದೆ ಎಂದು ತಜ್ಞರ ತಂಡದ ಡಾ.ಕೃಷ್ಣರಾಜ್ ಅಭಿಪ್ರಾಯಿಸಿದ್ದಾರೆ.
ಕೇಂದ್ರೀಯ ಹಸಿರು ನ್ಯಾಯ ಪೀಠದಲ್ಲಿ ನಂದಿಕೂರು ಜನಜಾಗೃತಿ ಸಮಿತಿ 2018 ರಲ್ಲಿ ಹೂಡಿದ್ದ ದಾವೆಯ ತೀರ್ಪು ಸಮಿತಿ ಪರವಾಗಿದ್ದು,ಆ ಕುರಿತಾಗಿ ಸಮಿತಿ ಬೇಡಿಕೆ ಇರಿಸಿದ್ದ 130 ಕೋಟಿ ರೂ. ಪರಿಹಾರ ಕುರಿತಾಗಿ ಈ ತಜ್ಞರ ತಂಡವು ಹಸಿರು ಪೀಠದ ಅದೇಶದಂತೆ ಯೋಜನಾ ಸಂತ್ರಸ್ತರ ಅಹವಾಲು ಆಲಿಸಲು ಅಲ್ಲಿಗೆ ತೆರಳಿದ್ದು, ಜಗನ್ನಾಥನ್ ಮೂಲ್ಯ ಹಾಗೂ ಜಯಂತ್ ಭಟ್ ಅವರ ಕೃಷಿ ಭೂಮಿಗೆ ತೆರಳಿ ಪರಿಶೀಲನೆ ನಡೆಸಿತು. ಕೃಷಿ, ತೋಟಗಾರಿಕೆ, ಆರೋಗ್ಯ , ಪರಿಸರ ಇಲಾಖೆ ಯ ಅಧಿಕಾರಿಗಳು ಜೊತೆಗಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…