Featured

ಪಡುಬಿದ್ರಿ70 ನೇ ಅಖಿಲಭಾರತ ಸಹಕಾರ ಸಪ್ತಾಹ ಸಮಾರೋಪ : ವೈ ಸುಧೀರ್ ಕುಮಾರ್ :- vishwanews24

ಪಡುಬಿದ್ರಿ70 ನೇ ಅಖಿಲಭಾರತ ಸಹಕಾರ ಸಪ್ತಾಹ ಸಮಾರೋಪ : ವೈ ಸುಧೀರ್ ಕುಮಾರ್ :- vishwanews24

ನವಿಕೃತ ಹವಾ ನಿಯಂತ್ರಿತ ಸಭಾಂಗಣ ಉದ್ಘಾಟನೆ ಸನ್ಮಾನ ಕೃಷಿ ಸಹಾಯಧನ ವಿತರಣೆ

ಪಡುಬಿದ್ರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ,ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಯುಕ್ತ ಆಶಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಹಾಗೂ ಸಹಕಾರ ಶಿಕ್ಷಣ ತರಬೇತಿಯ ಪರಿಷ್ಕರಣೆ ದಿನ, ಪಡುಬಿದ್ರಿ ಸೊಸೈಟಿಯ ನವಿಕೃತ ಹವಾ ನಿಯಂತ್ರಿತ ಸಭಾಂಗಣ ಉದ್ಘಾಟನೆ ಸನ್ಮಾನ ಕೃಷಿ ಸಹಾಯ ಧನ ವಿತರಣಾ ಸಮಾರಂಭ ವೈ ಲಕ್ಷ್ಮಣ ಸಭಾಂಗಣ ಸಹಕಾರ ಸಂಗಮ ಪಡುಬಿದ್ರಿ ಇಲ್ಲಿ ಸೋಮವಾರ ಪೂರ್ವಾಹ್ನ 10.30 ಕ್ಕೆ ಜರಗಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯ ಕ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಡಾ. ಎಂ ಎನ್ ರಾಜೇಂದ್ರ ಕುಮಾರ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವೈ .ಸುಧಿರ್ ಕುಮಾರ್ ವಹಿಸಲಿದ್ದಾರೆ, ನವೀಕೃತ ಹವಾನಿಯಂತ್ರಿತ ಸಭಾಂಗಣದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಇಂದ್ರಾಳಿ ಜಯಕರ ಶೆಟ್ಟಿ, ಸಹಕಾರ ಸಂಘಗಳ ಉಪಬಂಧಕರ ರಮೇಶ್ ಹೆಚ್ ಏನ್ , ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ , ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಕಲಾ ವೈ ಉಪಸ್ಥಿತರಿರುವರು, ಡಾ ಗಣನಾಥ ಎಕ್ಕಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆಂದು ಅವರು ತಿಳಿಸಿದರು.
ಇದೇ ಸಂಧರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ , ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ವೈ,ಅವರಿಗೆ ಸನ್ಮಾನ ಕಾರ್ಯಕ್ರಮ, ಬಾಲಕೃಷ್ಣ ಭಟ್ ಅವರಿಗೆ ಬಿಳ್ಕೋಡುಗೆ ಕಾರ್ಯಕ್ರಮ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ನಿರ್ದೇಶಕರುಗಳಾದ ಗಿರಿಶ್,ಶಿವರಾಮ್ ಶೆಟ್ಟಿ, ವಾಸುದೇವ ಪಲಿಮಾರು,ಮಾಧವ ಆಚಾರ್ಯ, ರಾಜರಾಮ್,ಯಶವಂತ್,ಸ್ಟ್ಯಾನಿ ಕಾಡ್ರಸ್, ಸುಚರಿತಾ ಅಮೀನ್,  ದೀಪಕ್ ಸಾಲ್ಯಾನ್ ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago