Featured

ಪಡುಬೆಳ್ಳೆ: ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ಸಂಶಯಾಸ್ಪದ ನಾಲ್ಕು ಮಂದಿ ಪೊಲೀಸ್‌ ವಶಕ್ಕೆ – Vishwanews24

ಪಡುಬೆಳ್ಳೆ: ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ಸಂಶಯಾಸ್ಪದ ನಾಲ್ಕು ಮಂದಿ ಪೊಲೀಸ್‌ ವಶಕ್ಕೆ

ಶಿರ್ವ: ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಪಡುಬೆಳ್ಳೆಯಲ್ಲಿ ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಮನೆಯವರ ಜಾತಿ,ಪಕ್ಷ ಮತ್ತಿತರ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ನಾಲ್ಕು ಮಂದಿ ಯುವಕರನ್ನು ಪಡುಬೆಳ್ಳೆ ವಿಶ್ವ ಹಿಂದು ಪರಿಷದ್‌,ಬಜರಂಗದಳದ ಕಾರ್ಯಕರ್ತರು ಹಿಡಿದು ಗುರುವಾರ ಶಿರ್ವ ಪೊಲೀಸರಿಗೊಪ್ಪಿಸಿದ್ದಾರೆ.

ನಾಲ್ಕು ಮಂದಿ ಅನ್ಯ ಮತೀಯ ಯುವಕರು ಉದ್ಯಾವರದ ಲಾಡ್ಜೊಂದರಲ್ಲಿ ನಿಂತಿದ್ದು, ಪಡುಬೆಳ್ಳೆಗೆ ಬಂದು ವೋಟರ್‌ ಲಿಸ್ಟ್‌ ಹಿಡಿದುಕೊಂಡು ಸುಮಾರು ಹತ್ತಿಪ್ಪತ್ತು ಮನೆಗಳ ಸಮೀಕ್ಷೆ ನಡೆಸಿದ್ದರು. ಸಂಶಯಗೊಂಡ ಕೆಲ ಮನೆಯವರು ಪಡುಬೆಳ್ಳೆ ವಿಶ್ವಹಿಂದು ಪರಿಷದ್‌,ಬಜರಂಗದಳದ ಕಾರ್ಯಕರ್ತರಿಗೆ ಕರೆ ಮಾಡಿದ್ದಾರೆ. ಯವಕರು ಬೇರೆ ಜಿಲ್ಲೆಯವರಾಗಿದ್ದು, ಹೊಸಪೇಟೆ ಮುನಿರಾಬಾದ್‌ನ ದೇವರಾಜ್‌ ಎಂಬವರ ಸೂಚನೆ ಮೇರೆಗೆ ಸಮೀಕ್ಷೆ ನಡೆಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಒಬ್ಬಳೇ ಮಹಿಳೆ ಇರುವ ಸಂದರ್ಭದಲ್ಲಿ ಸರ್ವೆ ನೆಪದಲ್ಲಿ 4 ಮಂದಿ ಯುವಕರು ಬಂದು ದರೋಡೆ ಯಾ ಮಾನಭಂಗಕ್ಕೆ ಯತ್ನಿಸಿದರೆ ಯಾರು ಗತಿ ಎಂದು ಪರಿಸರದ ಮಹಿಳೆಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಯಾವುದೇ ಸರ್ವೇ ನಡೆಸುವವರು ಜಿಲ್ಲಾಡಳಿತದ ಅನುಮತಿ ಪತ್ರ ಪಡೆದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪ್ರತಿ ನೀಡಿ ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆ ಮತ್ತು ಗ್ರಾ. ಪಂ.ಗೆ ಮಾಹಿತಿ ನೀಡಿದ ಬಳಿಕ ಸರ್ವೆ ನಡೆಸ ಬೇಕಾಗಿದೆ. ಇಲ್ಲದಿದ್ದಲ್ಲಿ ಗ್ರಾಮಸ್ಥರು ಅಂತಹ ವ್ಯಕ್ತಿಗಳು ಪರಿಸರದಲ್ಲಿ ಕಂಡುಬಂದರೆ ಗ್ರಾ.ಪಂ.ಗೆ ಮಾಹಿತಿ ನೀಡಿ ಅಥವಾ ಪೊಲೀಸ್‌ಠಾಣೆಗೆ ಕರೆ ಮಾಡಿ ಎಂದು ಶಿರ್ವ ಠಾಣಾಧಿಕಾರಿ ರಾಘವೆಂದ್ರ ಸಿ.ತಿಳಿಸಿದ್ದಾರೆ.
ಯುವಕರಲ್ಲಿ ದಿಲ್ಲಿ ಗುರ್ಗಾಂವ್‌ನ ನೇಶನ್‌ಟೈಮ್‌ ಸಂಸ್ಥೆಯ ಗುರುತು ಚೀಟಿ ಇದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago