Featured

ಪಡುಬೆಳ್ಳೆ: ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ಸಂಶಯಾಸ್ಪದ ನಾಲ್ಕು ಮಂದಿ ಪೊಲೀಸ್‌ ವಶಕ್ಕೆ – Vishwanews24

ಪಡುಬೆಳ್ಳೆ: ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ಸಂಶಯಾಸ್ಪದ ನಾಲ್ಕು ಮಂದಿ ಪೊಲೀಸ್‌ ವಶಕ್ಕೆ

ಶಿರ್ವ: ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಪಡುಬೆಳ್ಳೆಯಲ್ಲಿ ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಮನೆಯವರ ಜಾತಿ,ಪಕ್ಷ ಮತ್ತಿತರ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ನಾಲ್ಕು ಮಂದಿ ಯುವಕರನ್ನು ಪಡುಬೆಳ್ಳೆ ವಿಶ್ವ ಹಿಂದು ಪರಿಷದ್‌,ಬಜರಂಗದಳದ ಕಾರ್ಯಕರ್ತರು ಹಿಡಿದು ಗುರುವಾರ ಶಿರ್ವ ಪೊಲೀಸರಿಗೊಪ್ಪಿಸಿದ್ದಾರೆ.

ನಾಲ್ಕು ಮಂದಿ ಅನ್ಯ ಮತೀಯ ಯುವಕರು ಉದ್ಯಾವರದ ಲಾಡ್ಜೊಂದರಲ್ಲಿ ನಿಂತಿದ್ದು, ಪಡುಬೆಳ್ಳೆಗೆ ಬಂದು ವೋಟರ್‌ ಲಿಸ್ಟ್‌ ಹಿಡಿದುಕೊಂಡು ಸುಮಾರು ಹತ್ತಿಪ್ಪತ್ತು ಮನೆಗಳ ಸಮೀಕ್ಷೆ ನಡೆಸಿದ್ದರು. ಸಂಶಯಗೊಂಡ ಕೆಲ ಮನೆಯವರು ಪಡುಬೆಳ್ಳೆ ವಿಶ್ವಹಿಂದು ಪರಿಷದ್‌,ಬಜರಂಗದಳದ ಕಾರ್ಯಕರ್ತರಿಗೆ ಕರೆ ಮಾಡಿದ್ದಾರೆ. ಯವಕರು ಬೇರೆ ಜಿಲ್ಲೆಯವರಾಗಿದ್ದು, ಹೊಸಪೇಟೆ ಮುನಿರಾಬಾದ್‌ನ ದೇವರಾಜ್‌ ಎಂಬವರ ಸೂಚನೆ ಮೇರೆಗೆ ಸಮೀಕ್ಷೆ ನಡೆಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಒಬ್ಬಳೇ ಮಹಿಳೆ ಇರುವ ಸಂದರ್ಭದಲ್ಲಿ ಸರ್ವೆ ನೆಪದಲ್ಲಿ 4 ಮಂದಿ ಯುವಕರು ಬಂದು ದರೋಡೆ ಯಾ ಮಾನಭಂಗಕ್ಕೆ ಯತ್ನಿಸಿದರೆ ಯಾರು ಗತಿ ಎಂದು ಪರಿಸರದ ಮಹಿಳೆಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಯಾವುದೇ ಸರ್ವೇ ನಡೆಸುವವರು ಜಿಲ್ಲಾಡಳಿತದ ಅನುಮತಿ ಪತ್ರ ಪಡೆದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪ್ರತಿ ನೀಡಿ ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆ ಮತ್ತು ಗ್ರಾ. ಪಂ.ಗೆ ಮಾಹಿತಿ ನೀಡಿದ ಬಳಿಕ ಸರ್ವೆ ನಡೆಸ ಬೇಕಾಗಿದೆ. ಇಲ್ಲದಿದ್ದಲ್ಲಿ ಗ್ರಾಮಸ್ಥರು ಅಂತಹ ವ್ಯಕ್ತಿಗಳು ಪರಿಸರದಲ್ಲಿ ಕಂಡುಬಂದರೆ ಗ್ರಾ.ಪಂ.ಗೆ ಮಾಹಿತಿ ನೀಡಿ ಅಥವಾ ಪೊಲೀಸ್‌ಠಾಣೆಗೆ ಕರೆ ಮಾಡಿ ಎಂದು ಶಿರ್ವ ಠಾಣಾಧಿಕಾರಿ ರಾಘವೆಂದ್ರ ಸಿ.ತಿಳಿಸಿದ್ದಾರೆ.
ಯುವಕರಲ್ಲಿ ದಿಲ್ಲಿ ಗುರ್ಗಾಂವ್‌ನ ನೇಶನ್‌ಟೈಮ್‌ ಸಂಸ್ಥೆಯ ಗುರುತು ಚೀಟಿ ಇದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

22 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

24 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 days ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

2 days ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

2 days ago