Featured

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ – vishwanews24

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ

ಪಣಂಬೂರು: ಇಲ್ಲಿನ ಬೀಚ್‌ನಲ್ಲಿ ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವುಗೈದ‌ ಅಪ್ರಾಪ್ತ‌ವಯಸ್ಕ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಕಳವು ಗೈಯ್ಯಲಾಗಿದ್ದ 12 ಗ್ರಾಂ ತೂಕದ ಚೈನ್, 2 ಗ್ರಾಂ ತೂಕದ ಲಾಕೆಟ್, ತಲಾ 2 ಗ್ರಾಂ ತೂಕದ ಎರಡು ಉಂಗುರ ಮತ್ತು 4 ಗ್ರಾಂ ತೂಕದ ಕಿವಿಯೋಲೆ ಹಾಗೂ ರಿಯಲ್‌ಮಿ ಕಂಪೆನಿಯ ಮೊಬೈಲ್ ಪೋನ್-1, ಸ್ಯಾಂಸಂಗ್ S24 ಅಲ್ಟ್ರಾ ಮೊಬೈಲ್ ಪೋನ್-1 ಸೇರಿ‌ ಒಟ್ಟು 3.33 ಲಕ್ಷ‌ ರೂ.ಮೌಲ್ಯದ‌ ಸೊತ್ತನ್ನು ಪೊಲೀಸರು ವಶಕ್ಕೆ‌ ಪಡೆದುಕೊಂಡಿದ್ದಾರೆ.

ಸ್ವಾತಿ ನಂದಿಪಳ್ಳಿ ಎಂಬವರು ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ರವರೊಂದಿಗೆ ಬೆಳಿಗ್ಗೆ ಪಣಂಬೂರು ಬೀಚಿಗೆ ಬಂದವರು ಕಪ್ಪು ಬಣ್ಣದ ಬ್ಯಾಗ್ ವೊಂದರಲ್ಲಿ ಮೊಬೈಲ್‌‌ ಫೋನ್‌ಗಳು, ಚಿನ್ನಾಭರಣಗಳನ್ನು ಹಾಕಿ ಸಮುದ್ರ ತೀರದಲ್ಲಿಟ್ಟು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ‌ ಯಾರೋ ಕಳ್ಳ ಬ್ಯಾಗ್‌ ಸಮೇತ ಚಿನ್ನಾಭರಣ ಮೊಬೈಲ್ ಕಳವುಗೈದಿದ್ದಾಗಿ ಸ್ವಾತಿ‌ ಅವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ನ.24ರಂದು ದೂರು ನೀಡಿದ್ದರು.

ಕಾರ್ಯಾಚರಣೆ‌ ನಡೆಸಿದ ಪಣಂಬೂರು ಪೊಲೀಸರು 48ಗಂಟೆಯ ಒಳಗಾಗಿ ಕಳ್ಳನನ್ನು ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕೆ.ರವಿಶಂಕರ್, ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್, ಪಣಂಬೂರು ಪೊಲೀಸ್ ಉಪ ನಿರೀಕ್ಷರಾದ ಜ್ಞಾನಶೇಖರ, ಶ್ರೀಕಲಾ ಹಾಗೂ ಸಿಬ್ಬಂದಿಗಳಾದ ಸಿ.ಎಚ್.ಸಿ. ಸಯ್ಯದ್ ಇಮ್ತಿಯಾಝ್‌, ಪಿ.ಸಿ.ಗಳಾದ ರಾಕೇಶ್ ಮತ್ತು ಶರಣಬಸವ ಅವರು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago