Featured

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ – vishwanews24

ಪಣಂಬೂರು: ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವು; ಆರೋಪಿಯ ಬಂಧನ

ಪಣಂಬೂರು: ಇಲ್ಲಿನ ಬೀಚ್‌ನಲ್ಲಿ ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವುಗೈದ‌ ಅಪ್ರಾಪ್ತ‌ವಯಸ್ಕ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಕಳವು ಗೈಯ್ಯಲಾಗಿದ್ದ 12 ಗ್ರಾಂ ತೂಕದ ಚೈನ್, 2 ಗ್ರಾಂ ತೂಕದ ಲಾಕೆಟ್, ತಲಾ 2 ಗ್ರಾಂ ತೂಕದ ಎರಡು ಉಂಗುರ ಮತ್ತು 4 ಗ್ರಾಂ ತೂಕದ ಕಿವಿಯೋಲೆ ಹಾಗೂ ರಿಯಲ್‌ಮಿ ಕಂಪೆನಿಯ ಮೊಬೈಲ್ ಪೋನ್-1, ಸ್ಯಾಂಸಂಗ್ S24 ಅಲ್ಟ್ರಾ ಮೊಬೈಲ್ ಪೋನ್-1 ಸೇರಿ‌ ಒಟ್ಟು 3.33 ಲಕ್ಷ‌ ರೂ.ಮೌಲ್ಯದ‌ ಸೊತ್ತನ್ನು ಪೊಲೀಸರು ವಶಕ್ಕೆ‌ ಪಡೆದುಕೊಂಡಿದ್ದಾರೆ.

ಸ್ವಾತಿ ನಂದಿಪಳ್ಳಿ ಎಂಬವರು ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ರವರೊಂದಿಗೆ ಬೆಳಿಗ್ಗೆ ಪಣಂಬೂರು ಬೀಚಿಗೆ ಬಂದವರು ಕಪ್ಪು ಬಣ್ಣದ ಬ್ಯಾಗ್ ವೊಂದರಲ್ಲಿ ಮೊಬೈಲ್‌‌ ಫೋನ್‌ಗಳು, ಚಿನ್ನಾಭರಣಗಳನ್ನು ಹಾಕಿ ಸಮುದ್ರ ತೀರದಲ್ಲಿಟ್ಟು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ‌ ಯಾರೋ ಕಳ್ಳ ಬ್ಯಾಗ್‌ ಸಮೇತ ಚಿನ್ನಾಭರಣ ಮೊಬೈಲ್ ಕಳವುಗೈದಿದ್ದಾಗಿ ಸ್ವಾತಿ‌ ಅವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ನ.24ರಂದು ದೂರು ನೀಡಿದ್ದರು.

ಕಾರ್ಯಾಚರಣೆ‌ ನಡೆಸಿದ ಪಣಂಬೂರು ಪೊಲೀಸರು 48ಗಂಟೆಯ ಒಳಗಾಗಿ ಕಳ್ಳನನ್ನು ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕೆ.ರವಿಶಂಕರ್, ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್, ಪಣಂಬೂರು ಪೊಲೀಸ್ ಉಪ ನಿರೀಕ್ಷರಾದ ಜ್ಞಾನಶೇಖರ, ಶ್ರೀಕಲಾ ಹಾಗೂ ಸಿಬ್ಬಂದಿಗಳಾದ ಸಿ.ಎಚ್.ಸಿ. ಸಯ್ಯದ್ ಇಮ್ತಿಯಾಝ್‌, ಪಿ.ಸಿ.ಗಳಾದ ರಾಕೇಶ್ ಮತ್ತು ಶರಣಬಸವ ಅವರು ಭಾಗವಹಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

60 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago