ಪಣಂಬೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ.
ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ.
ಲಿಖಿತ್ ಅವರ ಮೃತದೇಹವನ್ನು ಉಪ್ಪಳದ ಮೀನುಗಾರರು ದಡಕ್ಕೆ ತಲುಪಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು ಠಾಣೆಗೆ ಮಾಹಿತಿ ನೀಡಿದ್ದಾರೆ.
ಕಳೆದ ಭಾನುವಾರ ಪೊರ್ಕೋಡಿಯ ಸ್ನೇಹಿತರಾದ ನಾಗರಾಜ್ (24),ಮಿಲನ್ (20) ಹಾಗೂ ಲಿಖಿತ್ ಅವರು ಜನಪದ ಪರಿಷತ್ ರಸಮಂಜರಿ ಕಾರ್ಯಕ್ರಮ ವೀಕ್ಷಣೆಗೆಂದು ಬಂದಿದ್ದರು. ಬಳಿಕ ಸಮುದ್ರದಲ್ಲಿ ಅವರೆಲ್ಲರೂ ಈಜಾಟ ನಡೆಸುತ್ತಿದ್ದರು. ಈ ವೇಳೆ ಭಾರೀ ಗಾಳಿಯಿಂದಾಗಿ ಅಲೆಗಳು ಅಪ್ಪಳಿಸಿದ್ದು, ಮೂವರು ಮುಳುಗಿ ನಾಪತ್ತೆಯಾಗಿದ್ದರು. ತಕ್ಷಣ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಇನ್ನು ಮಾರ್ಚ್ 4ರಂದು ವಿದ್ಯಾರ್ಥಿಗಳಾದ ನಾಗರಾಜ್, ಮಿಲನ್ ಅವರ್ ಮೃತದೇಹ ಪಣಂಬೂರಿನಲ್ಲಿ ಪತ್ತೆಯಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…