ಪಣಂಬೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ.
ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ.
ಲಿಖಿತ್ ಅವರ ಮೃತದೇಹವನ್ನು ಉಪ್ಪಳದ ಮೀನುಗಾರರು ದಡಕ್ಕೆ ತಲುಪಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು ಠಾಣೆಗೆ ಮಾಹಿತಿ ನೀಡಿದ್ದಾರೆ.
ಕಳೆದ ಭಾನುವಾರ ಪೊರ್ಕೋಡಿಯ ಸ್ನೇಹಿತರಾದ ನಾಗರಾಜ್ (24),ಮಿಲನ್ (20) ಹಾಗೂ ಲಿಖಿತ್ ಅವರು ಜನಪದ ಪರಿಷತ್ ರಸಮಂಜರಿ ಕಾರ್ಯಕ್ರಮ ವೀಕ್ಷಣೆಗೆಂದು ಬಂದಿದ್ದರು. ಬಳಿಕ ಸಮುದ್ರದಲ್ಲಿ ಅವರೆಲ್ಲರೂ ಈಜಾಟ ನಡೆಸುತ್ತಿದ್ದರು. ಈ ವೇಳೆ ಭಾರೀ ಗಾಳಿಯಿಂದಾಗಿ ಅಲೆಗಳು ಅಪ್ಪಳಿಸಿದ್ದು, ಮೂವರು ಮುಳುಗಿ ನಾಪತ್ತೆಯಾಗಿದ್ದರು. ತಕ್ಷಣ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಇನ್ನು ಮಾರ್ಚ್ 4ರಂದು ವಿದ್ಯಾರ್ಥಿಗಳಾದ ನಾಗರಾಜ್, ಮಿಲನ್ ಅವರ್ ಮೃತದೇಹ ಪಣಂಬೂರಿನಲ್ಲಿ ಪತ್ತೆಯಾಗಿತ್ತು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…