ಬಂಟ್ವಾಳ: ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಇದೇ 23ರಿಂದ 24ರತನಕ ವರ್ಷಾವಧಿ ಕೋಲ ಮತ್ತಿತರ ಕಾರ್ಯಕ್ರಮಗಳು ಕ್ಷೇತ್ರದ ಸಂಪ್ರದಾಯದಂತೆ ನೆರೆವೇರಲಿದೆ ಎಂದು ಆಡಳಿತಾಕಾರಿ, ತಹಸೀಲ್ದಾರ್ ಡಿ. ಅರ್ಚನಾ ಭಟ್ ತಿಳಿಸಿದ್ದಾರೆ.
ಇದೇ 23ರಂದು ಸಂಜೆ ಕೊಪ್ಪರಿಗೆ ಮುಹೂರ್ತ, ಕುಣಿತ ಭಜನೆ, ದೀಪ ಪ್ರಜ್ವಲನೆ, ನೃತ್ಯಾರಾಧನೆ ಬಳಿಕ ನಾಟಕ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ 24ರಂದು ಬೆಳಿಗ್ಗೆ ನವಕ ಕಲಶಪ್ರದನ, 12 ತೆಂಗಿನಕಾಯಿ ಗಣಹೋಮ, ನಾಗತಂಬಿಲ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಬಳಿಕ ಭಜನಾ ಸಂಕೀರ್ತನೆ, ಸಂಜೆ ಪಣೋಲಿಬೈಲು ಶ್ರೀಕೃಷ್ಣ ಮಂದಿರದಲ್ಲಿ ಭಜನಾ ಸಂಕೀರ್ತನೆ ಬಳಿಕ ಮೆರವಣಿಗೆ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ, ಗೀತ ಸಾಹಿತ್ಯ ಸಂಭ್ರಮ, ಭಂಡಾರದಮನೆಯಿಂದ ದೈವಗಳ ಭಂಡಾರ ಬರುವುದು, ತುಳು ನಾಟಕ ಪ್ರದರ್ಶನ ಬಳಿಕ ರಾತ್ರಿ ಗಂಟೆ 12ರಿಂದ ವರ್ಷಾವಧಿ ಕೋಲ ಸೇವೆ ನಡೆಯಲಿದೆ ಎಂದು ಕಾರ್ಯನಿರ್ವಹಣಾಕಾರಿ ದಿವಾಕರ ಮುಗುಳ್ಯ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…