Featured

ಪತಿಯ IPL ಬೆಟ್ಟಿಂಗ್‌ ದಂಧೆ : 1.5 ಕೋಟಿ ರೂಪಾಯಿ ಸಾಲ -ನೊಂದ ಹೆಂಡತಿ ಆತ್ಮಹತ್ಯೆಗೆ ಶರಣು – Vishwanews24

ಪತಿಯ IPL ಬೆಟ್ಟಿಂಗ್‌ ದಂಧೆ : 1.5 ಕೋಟಿ ರೂಪಾಯಿ ಸಾಲ -ನೊಂದ ಹೆಂಡತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪತಿಯು ಆನ್‌ಲೈನ್‌ ಕ್ರಿಕೆಟ್‌ ಬೆಟ್ಟಿಂಗ್‌ ಗೀಳಿನಿಂದಾಗಿ 1 ಕೋಟಿ ರೂ. ಕಳೆದುಕೊಂಡಿದ್ದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ  ನಡೆದಿದೆ.

ಹೊಸದುರ್ಗದ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿರುವ ದರ್ಶನ್‌ ಬಾಬು ಪತ್ನಿ ರಂಜಿತಾ (24) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಐಪಿಎಲ್‌ಗಾಗಿ ಬೆಟ್ಟಿಂಗ್‌ಗೀಳಿಗೆ ಸಿಲುಕಿದ್ದ ದರ್ಶನ್‌ ಬಾಬು 1.5 ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದ. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.

ಹೊಳಲ್ಕೆರೆಯ ಮನೆಯ ಬೆಡ್‌ರೂಂ ನಲ್ಲಿ ಮಾ.19 ರಂದು ರಂಜಿತಾಳ ಮೃತದೇಹ ಪತ್ತೆಯಾಗಿದೆ. ತನ್ನ ಈ ನಿರ್ಧಾರಕ್ಕೆ ಸಾಲ ನೀಡಿದ ವ್ಯಕ್ತಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆಕೆ ಬರೆದಿದ್ದಾಳೆ. ಪ್ರಕರಣ ಸಂಬಂಧ ರಂಜಿತಾ ತಂದೆ ತನ್ನ ಅಳಿಯನಿಗೆ ಕಾನೂನುಬಾಹಿರವಾಗಿ ಸಾಲ ನೀಡಿರುವ 13 ಮಂದಿ ವಿರುದ್ಧ ದೂರು ನೀಡಿದ್ದಾರೆ.

ದರ್ಶನ್‌ 2021 ರಿಂದ 2023 ರ ವರೆಗೆ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಹಣ ಹಾಕಿ ಎಲ್ಲವನ್ನೂ ಕಳೆದುಕೊಂಡಿದ್ದ. ಕ್ರಿಕೆಟ್‌ ಬೆಟ್ಟಿಂಗ್‌ಗೆ ಐಡಿಯಾ ಜೊತೆ ಹಣ ಕೊಟ್ಟವರು ಹಣ ಹಿಂದಿರುಗಿಸುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದರು. ದರ್ಶನ್‌ 54 ಲಕ್ಷ ರೂ. ಸಾಲ ಹಿಂದಿರುಗಿಸಲು ಬಾಕಿ ಇದೆ ಎಂದು ರಂಜಿತಾ ತಂದೆ ಆರೋಪಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago