ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೆ , ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಸ್ಪಷ್ಟವಾಗಿದ್ದು, ಈ ಮಧ್ಯೆಯೇ ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಅತ್ತ ಸಚಿವ ರೇವಣ್ಣ ಮಾತ್ರ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಪತಿ ಅಂಬರೀಷ್ ಸತ್ತು ಇನ್ನು ಒಂದೆರಡು ತಿಂಗಳಾಗಿಲ್ಲ. ಇಂತಹ ಸಂದರ್ಭದಲ್ಲಿ ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು’ ಎಂದು ಅವರು ನಟಿ ಸುಮಲತಾ ವಿರುದ್ದ ವಾಗ್ದಳಿ ನಡೆಸಿದ್ದಾರೆ.
ಅಂಬರೀಷ್ ಅವರು ಮೃತಪಟ್ಟಾಗ ,ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮನೆಯ ಸದಸ್ಯರಂತೆ ಮುಂದೆ ನಿಂತು ಜವಬ್ದಾರಿ ನಿಭಾಯಿಸಿ, ಕಂಬನಿ ಮಿಡಿದಿದ್ದರು. ಇದ್ಯಾವುದನ್ನು ಪರಿಗಣಿಸದೆ ಚುನಾವಣೆ ಸ್ಪರ್ಧೆ ಮಾಡುವುದಾಗಿ ಹೇಳಿ ಸುಮಲತಾ , ಜೆಡಿಎಸ್ ಗೆ ಸವಾಲು ಹಾಕಿದ್ದಾರೆ ’ ಎಂದು ಅಸಮಧಾನ ವ್ಯಕ್ತಪಡಿಸಿದರು. ಇದೀಗ ಸುಮಲತಾ ಅವರ ಸವಾಲ್ ನ್ನು ಸ್ವೀಕರಿಸುವಂತೆ ಅನಿವಾರ್ಯ ಸೃಷ್ಟಿ ಆಗಿದೆ ಎಂದ ರೇವಣ್ಣ ವಿವರಿಸಿದರು.
ಇದಕ್ಕೂ ಮೊದಲು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಬಗ್ಗೆ ಆಲೋಚನೆ ಇರಲಿಲ್ಲ. ಕೃತಜ್ಞತೆ ಲವಲೇಶವೂ ಇಲ್ಲದ ಸುಮಲತಾ ಅವರ ಸವಾಲನ್ನು ಸ್ವೀಕರಿಸಿಯೇ ಸ್ಪರ್ಧೆಯ ವಿಚಾರ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…