Featured

ಪತಿ ಅಂಬರೀಷ್ ಸತ್ತು ಇನ್ನು ಒಂದೆರಡು ತಿಂಗಳಾಗಿಲ್ಲ , ಇಂತಹ ಸಂದರ್ಭದಲ್ಲಿ ಸುಮಲತಾ ಅವರಿಗೆ ರಾಜಕೀಯ ಬೇಕಿತ್ತಾ? :ಸಚಿವ ರೇವಣ್ಣ – Vishwanews24

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೆ , ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಸ್ಪಷ್ಟವಾಗಿದ್ದು,  ಈ ಮಧ್ಯೆಯೇ ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್‌ ಕುಟುಂಬ ರಾಜಕಾರಣದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಅತ್ತ ಸಚಿವ ರೇವಣ್ಣ ಮಾತ್ರ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಪತಿ ಅಂಬರೀಷ್ ಸತ್ತು ಇನ್ನು ಒಂದೆರಡು ತಿಂಗಳಾಗಿಲ್ಲ. ಇಂತಹ ಸಂದರ್ಭದಲ್ಲಿ ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು’ ಎಂದು ಅವರು ನಟಿ ಸುಮಲತಾ ವಿರುದ್ದ ವಾಗ್ದಳಿ ನಡೆಸಿದ್ದಾರೆ.

ಅಂಬರೀಷ್ ಅವರು ಮೃತಪಟ್ಟಾಗ ,ಮುಖ್ಯಮಂತ್ರಿ ಎಚ್‌.ಡಿ. ‌ಕುಮಾರಸ್ವಾಮಿ ಅವರ ಮನೆಯ ಸದಸ್ಯರಂತೆ ಮುಂದೆ ನಿಂತು ಜವಬ್ದಾರಿ ನಿಭಾಯಿಸಿ, ಕಂಬನಿ ಮಿಡಿದಿದ್ದರು. ಇದ್ಯಾವುದನ್ನು ಪರಿಗಣಿಸದೆ ಚುನಾವಣೆ ಸ್ಪರ್ಧೆ ಮಾಡುವುದಾಗಿ ಹೇಳಿ ಸುಮಲತಾ , ಜೆಡಿಎಸ್ ಗೆ ಸವಾಲು ಹಾಕಿದ್ದಾರೆ ’ ಎಂದು ಅಸಮಧಾನ ವ್ಯಕ್ತಪಡಿಸಿದರು. ಇದೀಗ ಸುಮಲತಾ ಅವರ ಸವಾಲ್ ನ್ನು ಸ್ವೀಕರಿಸುವಂತೆ ಅನಿವಾರ್ಯ ಸೃಷ್ಟಿ ಆಗಿದೆ ಎಂದ ರೇವಣ್ಣ ವಿವರಿಸಿದರು.

ಇದಕ್ಕೂ ಮೊದಲು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಬಗ್ಗೆ ಆಲೋಚನೆ‌ ಇರಲಿಲ್ಲ. ಕೃತಜ್ಞತೆ ಲವಲೇಶವೂ ಇಲ್ಲದ ಸುಮಲತಾ ಅವರ ಸವಾಲನ್ನು ಸ್ವೀಕರಿಸಿಯೇ ಸ್ಪರ್ಧೆಯ ವಿಚಾರ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago