Featured

ಪತಿ ಹಾಗೂ ಅತ್ತೆಯಿಂದ ಕಿರುಕುಳ : ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ – vishwanews24

ಪತಿ ಹಾಗೂ ಅತ್ತೆಯಿಂದ ಕಿರುಕುಳ : ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ  ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.

ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ.

ಕುಮಾರ್ ಕಿರುಕುಳ ತಾಳಲಾರದೆ ಮಹಾದೇವಿ ಕಳೆದ ಹದಿನೈದು ದಿನಗಳ ಹಿಂದೆ ತವರು ಮನೆ ಸೇರಿದ್ದರು. ಆದರೂ ಸುಮ್ಮನಾಗದ ಪತಿ ಕುಮಾರ್ ಪತ್ನಿಗೆ ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಗುರುವಾರ ಹಾಸನಕ್ಕೆ ಬಂದಿದ್ದ ಮಹಾದೇವಿಗೆ ಬಸ್ ನಿಲ್ದಾಣದಲ್ಲೇ ಕುಮಾರ್ ನಿಂದಿಸಿದ್ದ. ಇದರಿಂದ ಮನನೊಂದಿದ್ದ ಮಹಾದೇವಿ ನಂತರ ಹಾಸನ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಬಳಿಕ ಡೆತ್‌ನೋಟ್ ಬರೆದಿಟ್ಟು ಮಗುವಿನೊಂದಿಗೆ ವೀಡಿಯೋ ಮಾಡಿದ್ದರು.

ಪತಿಯ ನಿಂದನೆ ಸಹಿಸಲು ಆಗುತ್ತಿಲ್ಲ. ನಾನು ಬದುಕಿರುವುದರಿಂದ ಅವನಿಗೆ ತೊಂದರೆ. ನನ್ನ ಸಾವಿಗೆ ನನ್ನ ಗಂಡ, ನನ್ನ ಅತ್ತೆ ಕಾರಣ. ಯಾವುದು ಬೇಡ, ಹೋರಾಟ ಮಾಡಲು, ಓಡಾಡಲು ಆಗುತ್ತಿಲ್ಲ. ನಾನು ಇದ್ದರೆ ತಮ್ಮ, ಅಪ್ಪ-ಅಮ್ಮನಿಗೂ ತೊಂದರೆ. ಬಾಯಿಗೆ ಬಂದಂತೆ ಬಯ್ಯುತ್ತಾನೆ. ಮೂರು ವರ್ಷದಿಂದ ನರಕ ಕೊಟ್ಟಿದ್ದಾನೆ. ಪೊಲೀಸರು ಹೇಳುವಷ್ಟು ಹೇಳಿದ್ದಾರೆ. ನನ್ನ ತಮ್ಮ, ಅಪ್ಪ, ಅಮ್ಮ ಎಲ್ಲರಿಗೂ ಜೀವ ಬೆದರಿಕೆ ಹಾಕಿದ್ದಾನೆ. ನನ್ನಿಂದ ಅವರ ಜೀವನ ಏಕೆ ಹಾಳಾಗಬೇಕು? ಮಗು ನನಗೆ ಹುಟ್ಟಿಲ್ಲ ಅಂತಾನೆ. ಇದನ್ನೆಲ್ಲಾ ಕೇಳಿಕೊಂಡು ಬದುಕಲು ಆಗಲ್ಲ, ಈ ಜೀವನವೇ ಬೇಡ ನನಗೆ ಎಂದು ಆತ್ಮಹತ್ಯೆಗೂ ಮುನ್ನ ಮಹಾದೇವಿ ವೀಡಿಯೋ ಮಾಡಿಟ್ಟು ನಾಪತ್ತೆಯಾಗಿದ್ದರು.

ಬಳಿಕ ಕುಟುಂಬಸ್ಥರು ಮಹಾದೇವಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸೋಮವಾರ ಅರಕಲಗೂಡು ತಾಲೂಕಿನ, ಬೆಟ್ಟಸೋಗೆ ಬಳಿ ಮಹಾದೇವಿ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ರಾಮನಾಥಪುರದ ಬಳಿಯ ಕಾವೇರಿ ನದಿಗೆ ಒಂದೂವರೆ ವರ್ಷದ ಮಗುವಿನೊಂದಿಗೆ ಹಾರಿ ಮಹಾದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮಗುವಿನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago