Featured

ಪತಿ ಹಾಗೂ ಅತ್ತೆಯಿಂದ ಕಿರುಕುಳ : ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ – vishwanews24

ಪತಿ ಹಾಗೂ ಅತ್ತೆಯಿಂದ ಕಿರುಕುಳ : ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ  ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.

ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ.

ಕುಮಾರ್ ಕಿರುಕುಳ ತಾಳಲಾರದೆ ಮಹಾದೇವಿ ಕಳೆದ ಹದಿನೈದು ದಿನಗಳ ಹಿಂದೆ ತವರು ಮನೆ ಸೇರಿದ್ದರು. ಆದರೂ ಸುಮ್ಮನಾಗದ ಪತಿ ಕುಮಾರ್ ಪತ್ನಿಗೆ ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಗುರುವಾರ ಹಾಸನಕ್ಕೆ ಬಂದಿದ್ದ ಮಹಾದೇವಿಗೆ ಬಸ್ ನಿಲ್ದಾಣದಲ್ಲೇ ಕುಮಾರ್ ನಿಂದಿಸಿದ್ದ. ಇದರಿಂದ ಮನನೊಂದಿದ್ದ ಮಹಾದೇವಿ ನಂತರ ಹಾಸನ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಬಳಿಕ ಡೆತ್‌ನೋಟ್ ಬರೆದಿಟ್ಟು ಮಗುವಿನೊಂದಿಗೆ ವೀಡಿಯೋ ಮಾಡಿದ್ದರು.

ಪತಿಯ ನಿಂದನೆ ಸಹಿಸಲು ಆಗುತ್ತಿಲ್ಲ. ನಾನು ಬದುಕಿರುವುದರಿಂದ ಅವನಿಗೆ ತೊಂದರೆ. ನನ್ನ ಸಾವಿಗೆ ನನ್ನ ಗಂಡ, ನನ್ನ ಅತ್ತೆ ಕಾರಣ. ಯಾವುದು ಬೇಡ, ಹೋರಾಟ ಮಾಡಲು, ಓಡಾಡಲು ಆಗುತ್ತಿಲ್ಲ. ನಾನು ಇದ್ದರೆ ತಮ್ಮ, ಅಪ್ಪ-ಅಮ್ಮನಿಗೂ ತೊಂದರೆ. ಬಾಯಿಗೆ ಬಂದಂತೆ ಬಯ್ಯುತ್ತಾನೆ. ಮೂರು ವರ್ಷದಿಂದ ನರಕ ಕೊಟ್ಟಿದ್ದಾನೆ. ಪೊಲೀಸರು ಹೇಳುವಷ್ಟು ಹೇಳಿದ್ದಾರೆ. ನನ್ನ ತಮ್ಮ, ಅಪ್ಪ, ಅಮ್ಮ ಎಲ್ಲರಿಗೂ ಜೀವ ಬೆದರಿಕೆ ಹಾಕಿದ್ದಾನೆ. ನನ್ನಿಂದ ಅವರ ಜೀವನ ಏಕೆ ಹಾಳಾಗಬೇಕು? ಮಗು ನನಗೆ ಹುಟ್ಟಿಲ್ಲ ಅಂತಾನೆ. ಇದನ್ನೆಲ್ಲಾ ಕೇಳಿಕೊಂಡು ಬದುಕಲು ಆಗಲ್ಲ, ಈ ಜೀವನವೇ ಬೇಡ ನನಗೆ ಎಂದು ಆತ್ಮಹತ್ಯೆಗೂ ಮುನ್ನ ಮಹಾದೇವಿ ವೀಡಿಯೋ ಮಾಡಿಟ್ಟು ನಾಪತ್ತೆಯಾಗಿದ್ದರು.

ಬಳಿಕ ಕುಟುಂಬಸ್ಥರು ಮಹಾದೇವಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸೋಮವಾರ ಅರಕಲಗೂಡು ತಾಲೂಕಿನ, ಬೆಟ್ಟಸೋಗೆ ಬಳಿ ಮಹಾದೇವಿ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ರಾಮನಾಥಪುರದ ಬಳಿಯ ಕಾವೇರಿ ನದಿಗೆ ಒಂದೂವರೆ ವರ್ಷದ ಮಗುವಿನೊಂದಿಗೆ ಹಾರಿ ಮಹಾದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮಗುವಿನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

16 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

28 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

42 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

49 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

54 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

59 minutes ago