ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.
ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…