ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.
ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…