ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.
ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…