Featured

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ – ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ  ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.

ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ಇದೇ ವಿಚಾರಕ್ಕೆ ಪುಷ್ಪ ಮತ್ತು ಮಹೇಶ್ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಹೆಂಡತಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಮಹೇಶ್ ಆಕೆಯ ಮೇಲೆ ತೀವ್ರವಾಗಿ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: 

ನಡೆದಿದ್ದೇನು?
ಯಥಾಪ್ರಕಾರ ನಿನ್ನೆ ತಡರಾತ್ರಿ ಪುಷ್ಪ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಜೋರಾಗಿ ಹೊಡೆದಿದ್ದಾನೆ. ಪುಷ್ಪ ಕೆಳಗೆ ಬಿದ್ದ ನಂತರ, ಅಷ್ಟಕ್ಕೇ ನಿಲ್ಲಿಸದ ಮಹೇಶ್ ದಿಂಬಿನಿಂದ ಆಕೆಯ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಪೊಲೀಸರಿಗೆ ಶರಣಾದ ಆರೋಪಿ:
ಪತ್ನಿಯನ್ನು ಕೊಂದ ನಂತರ ಪಶ್ಚಾತ್ತಾಪಕ್ಕೊಳಗಾದನೋ ಅಥವಾ ಕಾನೂನಿನ ಭಯದಿಂದಲೋ ಗೊತ್ತಿಲ್ಲ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

12 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

12 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

16 hours ago