Featured

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ – ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ  ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.

ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ಇದೇ ವಿಚಾರಕ್ಕೆ ಪುಷ್ಪ ಮತ್ತು ಮಹೇಶ್ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಹೆಂಡತಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಮಹೇಶ್ ಆಕೆಯ ಮೇಲೆ ತೀವ್ರವಾಗಿ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: 

ನಡೆದಿದ್ದೇನು?
ಯಥಾಪ್ರಕಾರ ನಿನ್ನೆ ತಡರಾತ್ರಿ ಪುಷ್ಪ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಜೋರಾಗಿ ಹೊಡೆದಿದ್ದಾನೆ. ಪುಷ್ಪ ಕೆಳಗೆ ಬಿದ್ದ ನಂತರ, ಅಷ್ಟಕ್ಕೇ ನಿಲ್ಲಿಸದ ಮಹೇಶ್ ದಿಂಬಿನಿಂದ ಆಕೆಯ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಪೊಲೀಸರಿಗೆ ಶರಣಾದ ಆರೋಪಿ:
ಪತ್ನಿಯನ್ನು ಕೊಂದ ನಂತರ ಪಶ್ಚಾತ್ತಾಪಕ್ಕೊಳಗಾದನೋ ಅಥವಾ ಕಾನೂನಿನ ಭಯದಿಂದಲೋ ಗೊತ್ತಿಲ್ಲ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago