Featured

ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಹೆಂಡತಿ ಅರೆಸ್ಟ್ – Vishwanews24

ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಹೆಂಡತಿ ಅರೆಸ್ಟ್

ಬೆಳಗಾವಿ: ಅಮವಾಸ್ಯೆ ಹಿನ್ನೆಲೆ ಗಂಡನೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಪತ್ನಿ ಎದುರೇ ಗಂಡನ  ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು,  ಹೆಂಡತಿ ಪ್ರಿಯಾಂಕಾ ಜಗಮತ್ತಿಯನ್ನ ಮೂಡಲಗಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸೋಮವಾರ ಭೀಮನ ಅಮವಾಸ್ಯೆಯಾಗಿದ್ದರಿಂದ ಶಂಕರ್ ಜಗಮತ್ತಿ ಮತ್ತು ಪ್ರಿಯಾಂಕಾ ಜಗಮತ್ತಿ ದಂಪತಿ ಮೂಡಲಗಿ  ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ  ಬಂದಿದ್ದರು. ಈ ವೇಳೆ ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳು ಪತಿಯ ಹತ್ಯೆ ಮಾಡಿದ್ದು, ಸ್ಥಳದಲ್ಲೇ ಶಂಕರ್ ಜಗಮತ್ತಿ ಸಾವನ್ನಪ್ಪಿದ್ದರು.

ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪ್ರಿಯಾಂಕಾಳ ಪ್ರಿಯಕರ ಶ್ರೀಧರ್ ತಳವಾರ(21), ಶಂಕರ್ ಪತ್ನಿ ಪ್ರಿಯಾಂಕ ಜಗಮತ್ತಿಯನ್ನು (21) ಬಂಧಿಸಲಾಗಿದೆ. ಮೊದಲೇ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದ ಪ್ರಿಯಾಂಕಾ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್‌ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಬರುತ್ತಿದ್ದಂತೆ ಆರೋಪಿ ಶ್ರೀಧರ್ ಪ್ರಿಯಾಂಕಾ ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದ.

ಇತ್ತ ಏನು ಗೊತ್ತಿಲ್ಲದಂತೆ ನಾಟಕ ಆಡಿದ್ದ ಪ್ರಿಯಾಂಕಾ ಬೈಕ್ ತನ್ನಿ ಎಂದು ದೂರದಲ್ಲಿ ನಿಂತಿದ್ದಳು. ಕೊಲೆ ಬಳಿಕ ಏನೂ ಗೊತ್ತಿಲ್ಲದಂತೆ ಸುಪನಾತಿ ಹೆಂಡತಿ ಭರ್ಜರಿ ನಾಟಕ ಆಡಿದ್ದಳು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ  ಇರುವುದು ಬೆಳಕಿಗೆ ಬಂದಿದೆ. ಈ ವೇಳೆ ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಿದ್ದಾರೆ.

ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago