ಉತ್ತರಪ್ರದೇಶ: ಪತ್ನಿ ವ್ಯಾಸಂಗಕ್ಕೆ ಸಹಾಯ ಮಾಡಿದ್ದು, ಜೀವನದಲ್ಲಿ ಮುಂದೆ ಬಂದ ನಂತರ ಆಕೆ ತನ್ನನ್ನು ತೊರೆದಿದ್ದಾಳೆ ಎಂದು ವ್ಯಕ್ತಿಯೊಬ್ಬ ಆರೋಪಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾಳನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ತಾಯಿದ್ದಂತೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.
ಪತ್ನಿ ಇನ್ನು ಮುಂದೆ ತನ್ನೊಂದಿಗೆ ಮಾತನಾಡುತ್ತಿಲ್ಲ ಮತ್ತು ತನ್ನ ಕರೆಗಳನ್ನು ಸಹ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಕಾಲೇಜಿಗೆ ಭೇಟಿ ನೀಡುವ ನೆಪದಲ್ಲಿ ಮನೆಯಿಂದ ಹೊರಟರು. ಆದರೆ, ಆ ಬಳಿಕ ಆಕೆ ಹಿಂತಿರುಗಿರಲಿಲ್ಲ ಎಂದು ಗೋಳಿಟ್ಟಿದ್ದಾನೆ.
ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. 2022 ಫೆಬ್ರವರಿ 6ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…