ಉತ್ತರಪ್ರದೇಶ: ಪತ್ನಿ ವ್ಯಾಸಂಗಕ್ಕೆ ಸಹಾಯ ಮಾಡಿದ್ದು, ಜೀವನದಲ್ಲಿ ಮುಂದೆ ಬಂದ ನಂತರ ಆಕೆ ತನ್ನನ್ನು ತೊರೆದಿದ್ದಾಳೆ ಎಂದು ವ್ಯಕ್ತಿಯೊಬ್ಬ ಆರೋಪಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾಳನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ತಾಯಿದ್ದಂತೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.
ಪತ್ನಿ ಇನ್ನು ಮುಂದೆ ತನ್ನೊಂದಿಗೆ ಮಾತನಾಡುತ್ತಿಲ್ಲ ಮತ್ತು ತನ್ನ ಕರೆಗಳನ್ನು ಸಹ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಕಾಲೇಜಿಗೆ ಭೇಟಿ ನೀಡುವ ನೆಪದಲ್ಲಿ ಮನೆಯಿಂದ ಹೊರಟರು. ಆದರೆ, ಆ ಬಳಿಕ ಆಕೆ ಹಿಂತಿರುಗಿರಲಿಲ್ಲ ಎಂದು ಗೋಳಿಟ್ಟಿದ್ದಾನೆ.
ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. 2022 ಫೆಬ್ರವರಿ 6ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…