ಉತ್ತರಪ್ರದೇಶ: ಪತ್ನಿ ವ್ಯಾಸಂಗಕ್ಕೆ ಸಹಾಯ ಮಾಡಿದ್ದು, ಜೀವನದಲ್ಲಿ ಮುಂದೆ ಬಂದ ನಂತರ ಆಕೆ ತನ್ನನ್ನು ತೊರೆದಿದ್ದಾಳೆ ಎಂದು ವ್ಯಕ್ತಿಯೊಬ್ಬ ಆರೋಪಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾಳನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ತಾಯಿದ್ದಂತೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.
ಪತ್ನಿ ಇನ್ನು ಮುಂದೆ ತನ್ನೊಂದಿಗೆ ಮಾತನಾಡುತ್ತಿಲ್ಲ ಮತ್ತು ತನ್ನ ಕರೆಗಳನ್ನು ಸಹ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಕಾಲೇಜಿಗೆ ಭೇಟಿ ನೀಡುವ ನೆಪದಲ್ಲಿ ಮನೆಯಿಂದ ಹೊರಟರು. ಆದರೆ, ಆ ಬಳಿಕ ಆಕೆ ಹಿಂತಿರುಗಿರಲಿಲ್ಲ ಎಂದು ಗೋಳಿಟ್ಟಿದ್ದಾನೆ.
ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. 2022 ಫೆಬ್ರವರಿ 6ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…