ಹಾವೇರಿ: ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ ಪತಿ. ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಕುರಿಗಾಹಿಯಾಗಿದ್ದರು. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನನ್ನ ಹೆಂಡತಿ, ಅವರ ತಂದೆ-ತಾಯಿ, ಅವರ ಮಾವ ಭೀರಪ್ಪ, ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಮಾನಸಿಕವಾಗಿ ತುಂಬಾ ಹಿಂಸೆ ಕೊಟ್ಟಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕಣ್ಣೀರು ಹಾಕಿದ್ದಾರೆ. ಘಟನೆ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…