Featured

ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ – vishwanews24

ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ದಾವಣಗೆರೆ : ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ನಡೆದಿದೆ. 35 ವರ್ಷದ ಉದಯ್ ಎಂಬಾತ ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಎಂಬುವರನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎಂಟು ತಿಂಗಳ ಹಿಂದೆ ಉದಯ್ ಅವರ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿಯನ್ನು ಕಳೆದುಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಉದಯ್ ಇಬ್ಬರು ಮಕ್ಕಳ ಕುತ್ತಿಗೆ ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಲತಃ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಚಳಗೇರೆ ಗ್ರಾಮದ ಹೇಮಾ ಹಾಗೂ ಉದಯ್ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಹೇಮಾ ಸಾವಿನ ನಂತರ ಉದಯ್ ಖಿನ್ನತೆಗೆ ಒಳಗಾಗಿದ್ದರು.  ಏಳು ಪುಟಗಳ ಪತ್ರ ಬರೆದಿಟ್ಟು, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago