ಉಡುಪಿ: ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ವತಿಯಿಂದ ಶನಿವಾರ ನಗರದಲ್ಲಿನ ಮಾಧ್ಯಮ ಮಿತ್ರರೊಂದಿಗೆ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಕ್ರಿಸ್ಮಸ್ ಸ್ನೇಹ ಕೂಟವನ್ನು ಆಚರಿಸಿದರು.
ಕಾರ್ಯಕ್ರಮವನ್ನು ಕೇಕ್ ಕತ್ತರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಜಗತ್ತು ಎಂಬ ಕುಟುಂಬದಲ್ಲಿ ನಾವೆಲ್ಲರೂ ವಾಸಿಸುತ್ತಿರುವಾಗ ನಮ್ಮ ಧರ್ಮ, ಸಂಸ್ಕೃತಿ, ಆಚಾರ-ವಿಚಾರ, ರೀತಿ-ರಿವಾಜುಗಳನ್ನು ದಾಟಿ ಮಾನವೀಯ ಮೌಲ್ಯಗಳನ್ನು ಪಸರಿಸಬೇಕು. ಈ ಕಾಲಘಟ್ಟದಲ್ಲಿ ಹೊಸ ಚಿಂತನೆ, ಹೊಸ ಪ್ರಪಂಚದ ದೃಷ್ಠಿಕೋನ ಅಗತ್ಯವಿದೆ. ನಾವೆಲ್ಲರೂ ಒಂದೇ ಕುಟಂಬಕ್ಕೆ ಸೇರಿದವರು ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಫಾದರ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು ಶನಿವಾರ ಉಡುಪಿಯ ಬಿಷಪ್ ಹೌಸ್ ನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಜರುಗಿದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟದ ಸಮಾರಂಭದಲ್ಲಿ ಮಾತನಾಡಿದರು.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಲಾಕ್ ಡೌನ್ ನಿಂದ ಬಹಳಷ್ಟು ಮಂದಿ ಬೀದಿಪಾಲು, ಅನೇಕ ಮಂದಿ ಉದ್ಯೋಗ ಕಳೆದುಕೊಂಡರು. ಆ ಸಂದರ್ಭದಲ್ಲಿ ಕಷ್ಟಕ್ಕೆ ಸಿಲುಕಿದವರಿಗೆ ಸಮಾಧಾನ, ಸಾಂತ್ವಾನ ಅಗತ್ಯವಾಗಿ ಬೇಕಿತ್ತು. ಉಡುಪಿ ಧರ್ಮ ಪ್ರಾಂತ್ಯ ಎಲ್ಲಾ ರೀತಿಯಲ್ಲೂ ಸಂತ್ರಸ್ತರಿಗೆ ಸಹಾಯಾಸ್ತ ಚಾಚಿದೆ. ಒಂಭತ್ತು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ, ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗಿದೆ. ನೂರಾರು ಬಡಜನರಿಗೆ ನಮ್ಮ ವಿದ್ಯಾ ಸಂಸ್ಥೆಗಳಲ್ಲಿ ವಸತಿ ಕಲ್ಪಿಸಿ ಉಚಿತವಾಗಿ ಬೇಕಾದಂತಹ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿದ್ದೇವೆ. ಈ ಸಮಯದಲ್ಲಿ ಮಾನವೀಯತೆಯಿಂದ ಜಾತಿ, ಮತ, ಭೇದವಿಲ್ಲದೆ ಜನರ ಸಂಕಷ್ಟಗಳನ್ನು ಹಗುರಗೊಳಿಸಲು ಪ್ರಯತ್ನಿಸಿದ್ದೇವೆ ಎಂದರು.
ಲಾಕ್ ಡೌನ್ ನಂತಹ ಸಂದಿಗ್ಧ ಸ್ಥಿತಿಯಲ್ಲಿ ವೈದ್ಯರು, ದಾದಿಯರು, ಪೊಲೀಸರು ಕೋವಿಡ್ ಸೇನಾನಿಗಳಾಗಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಅಂತೆಯೇ ಪತ್ರಕರ್ತರೂ ಕೂಡ ಯಾರೂ ಕೂಡ ಮನೆಯಿಂದ ಹೊರಗಡೆ ಬಾರದ ಕಠಿಣ ದಿನಗಳಲ್ಲಿ ವಸ್ತುನಿಷ್ಠ ವರದಿ ಭಿತ್ತರಿಸಿದ್ದಾರೆ. ಪತ್ರಕರ್ತರೂ ಕೂಡ ಕೋವಿಡ್ ಸೇನಾನಿಗಳಂತೆ ಕೆಲಸ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ ಚೇತನ್ ಲೋಬೊ ಅವರ ಬರಹಗಳ ಸಂಗ್ರಹ ಚೇತನ ಚಿಂತನ ಪುಸ್ತಕ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಉದಯ್ ಪಡಿಯಾರ್, ಶ್ರೀಪತಿ ಹೆಗ್ಡೆ ಹಕ್ಲಾಡಿ, ಬ್ಯಾರಿ ಅಕಾಡೆಮಿ ಸದಸ್ಯ ನಝೀರ್ ಪೊಲ್ಯ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಉಡುಪಿ ಶೋಕ ಮಾತಾ ಇಗರ್ಜಿ ಧರ್ಮಗುರು ವಂ ಚಾರ್ಲ್ಸ್ ಮಿನೇಜಸ್, ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ ಚೇತನ್ ಲೋಬೊ ಸ್ವಾಗತಿಸಿ, ಮಾಧ್ಯಮ ಸಮನ್ವಯಕಾರ ಮೈಕಲ್ ರೊಡ್ರಿಗಸ್ ವಂದಿಸಿ, ವಂ|ರೊಯ್ಸನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…