Featured

ಪತ್ರಕರ್ತ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವನ್ನು ಆಚರಿಸಿದ ಉಡುಪಿ ಧರ್ಮಾಧ್ಯಕ್ಷ ಜೆರಾಲ್ಡ್ ಲೋಬೊ -Vishwanews24

ಪತ್ರಕರ್ತರೂ ಕೋವಿಡ್ ಸೇನಾನಿಗಳು ;

ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವನ್ನು ಆಚರಿಸಿದ ಉಡುಪಿ ಧರ್ಮಾಧ್ಯಕ್ಷ ಜೆರಾಲ್ಡ್ ಲೋಬೊ -Vishwanews24

ಉಡುಪಿ: ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ವತಿಯಿಂದ ಶನಿವಾರ ನಗರದಲ್ಲಿನ ಮಾಧ್ಯಮ ಮಿತ್ರರೊಂದಿಗೆ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಕ್ರಿಸ್ಮಸ್ ಸ್ನೇಹ ಕೂಟವನ್ನು ಆಚರಿಸಿದರು.

ಕಾರ್ಯಕ್ರಮವನ್ನು ಕೇಕ್ ಕತ್ತರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ  ಜಗತ್ತು ಎಂಬ ಕುಟುಂಬದಲ್ಲಿ ನಾವೆಲ್ಲರೂ ವಾಸಿಸುತ್ತಿರುವಾಗ ನಮ್ಮ ಧರ್ಮ, ಸಂಸ್ಕೃತಿ, ಆಚಾರ-ವಿಚಾರ, ರೀತಿ-ರಿವಾಜುಗಳನ್ನು ದಾಟಿ ಮಾನವೀಯ ಮೌಲ್ಯಗಳನ್ನು ಪಸರಿಸಬೇಕು. ಈ ಕಾಲಘಟ್ಟದಲ್ಲಿ ಹೊಸ ಚಿಂತನೆ, ಹೊಸ ಪ್ರಪಂಚದ ದೃಷ್ಠಿಕೋನ ಅಗತ್ಯವಿದೆ. ನಾವೆಲ್ಲರೂ ಒಂದೇ ಕುಟಂಬಕ್ಕೆ ಸೇರಿದವರು ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಫಾದರ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಅವರು ಶನಿವಾರ ಉಡುಪಿಯ ಬಿಷಪ್ ಹೌಸ್ ನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಜರುಗಿದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟದ ಸಮಾರಂಭದಲ್ಲಿ ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಲಾಕ್ ಡೌನ್ ನಿಂದ ಬಹಳಷ್ಟು ಮಂದಿ ಬೀದಿಪಾಲು, ಅನೇಕ ಮಂದಿ ಉದ್ಯೋಗ ಕಳೆದುಕೊಂಡರು. ಆ ಸಂದರ್ಭದಲ್ಲಿ ಕಷ್ಟಕ್ಕೆ ಸಿಲುಕಿದವರಿಗೆ ಸಮಾಧಾನ, ಸಾಂತ್ವಾನ ಅಗತ್ಯವಾಗಿ ಬೇಕಿತ್ತು. ಉಡುಪಿ ಧರ್ಮ ಪ್ರಾಂತ್ಯ ಎಲ್ಲಾ ರೀತಿಯಲ್ಲೂ ಸಂತ್ರಸ್ತರಿಗೆ ಸಹಾಯಾಸ್ತ ಚಾಚಿದೆ. ಒಂಭತ್ತು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ, ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗಿದೆ. ನೂರಾರು ಬಡಜನರಿಗೆ ನಮ್ಮ ವಿದ್ಯಾ ಸಂಸ್ಥೆಗಳಲ್ಲಿ ವಸತಿ ಕಲ್ಪಿಸಿ ಉಚಿತವಾಗಿ ಬೇಕಾದಂತಹ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿದ್ದೇವೆ. ಈ ಸಮಯದಲ್ಲಿ ಮಾನವೀಯತೆಯಿಂದ ಜಾತಿ, ಮತ, ಭೇದವಿಲ್ಲದೆ ಜನರ ಸಂಕಷ್ಟಗಳನ್ನು ಹಗುರಗೊಳಿಸಲು ಪ್ರಯತ್ನಿಸಿದ್ದೇವೆ ಎಂದರು.

ಲಾಕ್ ಡೌನ್ ನಂತಹ ಸಂದಿಗ್ಧ ಸ್ಥಿತಿಯಲ್ಲಿ ವೈದ್ಯರು, ದಾದಿಯರು, ಪೊಲೀಸರು ಕೋವಿಡ್ ಸೇನಾನಿಗಳಾಗಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಅಂತೆಯೇ ಪತ್ರಕರ್ತರೂ ಕೂಡ ಯಾರೂ ಕೂಡ ಮನೆಯಿಂದ ಹೊರಗಡೆ ಬಾರದ ಕಠಿಣ ದಿನಗಳಲ್ಲಿ ವಸ್ತುನಿಷ್ಠ ವರದಿ ಭಿತ್ತರಿಸಿದ್ದಾರೆ. ಪತ್ರಕರ್ತರೂ ಕೂಡ ಕೋವಿಡ್ ಸೇನಾನಿಗಳಂತೆ ಕೆಲಸ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ ಚೇತನ್ ಲೋಬೊ ಅವರ ಬರಹಗಳ ಸಂಗ್ರಹ ಚೇತನ ಚಿಂತನ ಪುಸ್ತಕ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಉದಯ್ ಪಡಿಯಾರ್, ಶ್ರೀಪತಿ ಹೆಗ್ಡೆ ಹಕ್ಲಾಡಿ, ಬ್ಯಾರಿ ಅಕಾಡೆಮಿ ಸದಸ್ಯ ನಝೀರ್ ಪೊಲ್ಯ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಉಡುಪಿ ಶೋಕ ಮಾತಾ ಇಗರ್ಜಿ ಧರ್ಮಗುರು ವಂ ಚಾರ್ಲ್ಸ್ ಮಿನೇಜಸ್, ಹಾಗೂ ಇತರರು ಉಪಸ್ಥಿತರಿದ್ದರು.

ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ ಚೇತನ್ ಲೋಬೊ ಸ್ವಾಗತಿಸಿ, ಮಾಧ್ಯಮ ಸಮನ್ವಯಕಾರ ಮೈಕಲ್ ರೊಡ್ರಿಗಸ್ ವಂದಿಸಿ, ವಂ|ರೊಯ್ಸನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

3 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

3 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

3 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

4 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

4 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

4 hours ago