Featured

ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲ , ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಸಚಿವೆ ಶೋಭಾ – Vishwanews24

ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ..

ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ, ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ..

ಯಾವುದಕ್ಕೂ  ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ..

ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ, ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡಬಾರದು..

ಕೇಂದ್ರದ ಮಂತ್ರಿಗಳೊಂದಿಗೆ ಜಗಳವಾಡಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರಕ್ಕೆ ಅನುದಾನ ತಂದಿದ್ದೇನೆ..

ಚಿಕ್ಕಮಗಳೂರು: ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ. ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಅವರು ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ. ಇಲ್ಲೂ ನಡೆಸಿದ್ದಾರೆ. ಇದ್ಯಾವುದಕ್ಕೂ ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ತಿರುಗೇಟು ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಆದರೆ, ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡಬಾರದು. ನಾವು ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ ಎಂದರು.

ಚಿಕ್ಕಮಗಳೂರು- ಉಡುಪಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದೇನೆಂಬ ಮಾಹಿತಿ ನನಗೂ ಇದೆ. ನಾನು ಇದುವರೆಯೂ ಯಾವ ಗುತ್ತಿಗೆದಾರನಿಂದ ಒಂದು ರೂ. ಪಡೆದಿಲ್ಲ ಅವರ ಮುಖವನ್ನು ಕೂಡ ನೋಡಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದರು.

ಕೇಂದ್ರದ ಮಂತ್ರಿಗಳೊಂದಿಗೆ ಜಗಳವಾಡಿ ಇಲ್ಲಿಗೆ ಅನುದಾನ ತಂದಿದ್ದೇನೆ. ಅಭಿಯಾನ, ಪತ್ರ ಚಳುವಳಿ ಯಾವುದು ಎಫೇಕ್ಟ್ ಆಗಲ್ಲ. ನಾನು ಮಂತ್ರಿಯಾಗಿ ಒಳ್ಳೇ ಕೆಲಸ ಮಾಡಿದ್ದೇನೆ.‌ ಇದೇ‌ ರೀತಿ ಹಿಂದಿನ ಚುನಾವಣೆಯಲ್ಲೂ ಮಾಡಿದ್ದರು ಎಂದು ಹೇಳಿದರು. ಅನುಧಾನ ತಂದಿರುವ ಬಗ್ಗೆ ಪ್ರಶ್ನಿಸುವಾಗ ಬಹಳ ಬುದ್ದಿವಂತಿಕೆಯಿಂದ ಕೇಳಿದ್ದಾರೆ. 2019, 20,21ರ ಅನುದಾನ ಕೇಳಿದ್ದಾರೆ. ಆದರೆ ಆ ವರ್ಷದಲ್ಲಿ ಕೇಂದ್ರದಿಂದ ಎಂ.ಪಿಗಳಿಗೆ ನಿಧಿಯನ್ನು ಕೊಟ್ಟಿಲ್ಲ ಆ ವರ್ಷ ನಿಧಿಯನ್ನು ಕೊರೊನಕ್ಕೆ ಬಳಕೆ ಮಾಡಲಾಗಿತ್ತು. ಆರ್ ಟಿಐನಲ್ಲಿ ಕೇಳಲಾಗಿದೆ ಇದರ ಹಿಂದಿರುವ ಉದ್ದೇಶ ಕೆಟ್ಟದಿದೆ. ಇದನ್ನು ಯಾರು ಮಾಡಿದ್ದಾರೆ ಅವರು ಮುಂದೇ ಅನುಭವಿಸುತ್ತಾರೆ ಎಂದು ಹೇಳಿದರು.

Vishwa News 24

Recent Posts

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

18 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

38 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

56 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

1 hour ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

1 hour ago