ಕುವೈತ್: 600 ದಿನಾರ್ಗಳಿಂದ ಕಡಿಮೆ ಸಂಬಳ ಇರುವ ಹಾಗೂ ಮಾನ್ಯತೆ ಪಡೆದ ವಿವಿಯಿಂದ ಪದವಿ ಅಥವಾ ಡಿಪ್ಲೊಮಾ ಹೊಂದಿಲ್ಲದೇ ಇರುವ ವಿದೇಶಿ ಚಾಲಕರ ಚಾಲನಾ ಪರವಾನಗಿಯನ್ನು ಹಿಂಪಡೆಯಲು ಕುವೈತ್ ಸರ್ಕಾರ ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದರೆ ಭಾರತೀಯರು ಸೇರಿ 3 ಲಕ್ಷ ಚಾಲಕರಿಗೆ ಸಂಕಷ್ಟ ಎದುರಾಗಲಿದೆ.
ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಕುವೈತ್ ಗೃಹ ಸಚಿವಾಲಯ ತಿಳಿಸಿದೆ. ಸರ್ಕಾರದ ಈ ನಿರ್ಧಾರವು ಅಲ್ಲಿ ವಾಸಿಸುತ್ತಿರುವ ವಿದೇಶಿ ಚಾಲಕರಿಗೆ ಆಶ್ಚರ್ಯ ಮತ್ತು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದರಿಂದ ಇವರಿಗೆ ಸಂಬಳ ಕೊಟ್ಟು ಸಲಹುತ್ತಿರುವ ಟ್ಯಾಕ್ಸಿ ಕಂಪನಿಗಳು ಹಾಗೂ ಮಾಲೀಕರಿಗೂ ತೊಂದರೆಯಾಗಲಿದೆ.
ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕುವೈತ್ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯು ಸಂಬಳ ಮತ್ತು ಪದವಿ ಆಧಾರದಲ್ಲಿ ಅರ್ಹತೆ ಪೂರೈಸದವರ ಚಾಲನಾ ಪರವಾನಗಿ ರದ್ದುಪಡಿಸಲು ಶಿಫಾರಸು ಮಾಡಿದೆ. ಇದಕ್ಕೆ ನಾನಾ ವಲಯಗಳಿಂದ ವಿರೋಧ ವ್ಯಕ್ತವಾಗಿದೆ.
ಸಂಚಾರ ದಟ್ಟಣೆ ತಗ್ಗಿಸಲು ಅನೇಕ ಪರ್ಯಾಯ ಮಾರ್ಗಗಳಿವೆ. ರಸ್ತೆಗಳ ಸುಧಾರಣೆ, ಸೇತುವೆಗಳು ಹಾಗೂ ಸುರಂಗಗಳ ನಿರ್ಮಾಣ, ಸಾರ್ವಜನಿಕ ಸಾರಿಗೆ ಸುಧಾರಣೆ ಸೇರಿದಂತೆ ನಾನಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ನಾಗರಿಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…