ಕುವೈತ್: 600 ದಿನಾರ್ಗಳಿಂದ ಕಡಿಮೆ ಸಂಬಳ ಇರುವ ಹಾಗೂ ಮಾನ್ಯತೆ ಪಡೆದ ವಿವಿಯಿಂದ ಪದವಿ ಅಥವಾ ಡಿಪ್ಲೊಮಾ ಹೊಂದಿಲ್ಲದೇ ಇರುವ ವಿದೇಶಿ ಚಾಲಕರ ಚಾಲನಾ ಪರವಾನಗಿಯನ್ನು ಹಿಂಪಡೆಯಲು ಕುವೈತ್ ಸರ್ಕಾರ ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದರೆ ಭಾರತೀಯರು ಸೇರಿ 3 ಲಕ್ಷ ಚಾಲಕರಿಗೆ ಸಂಕಷ್ಟ ಎದುರಾಗಲಿದೆ.
ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಕುವೈತ್ ಗೃಹ ಸಚಿವಾಲಯ ತಿಳಿಸಿದೆ. ಸರ್ಕಾರದ ಈ ನಿರ್ಧಾರವು ಅಲ್ಲಿ ವಾಸಿಸುತ್ತಿರುವ ವಿದೇಶಿ ಚಾಲಕರಿಗೆ ಆಶ್ಚರ್ಯ ಮತ್ತು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದರಿಂದ ಇವರಿಗೆ ಸಂಬಳ ಕೊಟ್ಟು ಸಲಹುತ್ತಿರುವ ಟ್ಯಾಕ್ಸಿ ಕಂಪನಿಗಳು ಹಾಗೂ ಮಾಲೀಕರಿಗೂ ತೊಂದರೆಯಾಗಲಿದೆ.
ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕುವೈತ್ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯು ಸಂಬಳ ಮತ್ತು ಪದವಿ ಆಧಾರದಲ್ಲಿ ಅರ್ಹತೆ ಪೂರೈಸದವರ ಚಾಲನಾ ಪರವಾನಗಿ ರದ್ದುಪಡಿಸಲು ಶಿಫಾರಸು ಮಾಡಿದೆ. ಇದಕ್ಕೆ ನಾನಾ ವಲಯಗಳಿಂದ ವಿರೋಧ ವ್ಯಕ್ತವಾಗಿದೆ.
ಸಂಚಾರ ದಟ್ಟಣೆ ತಗ್ಗಿಸಲು ಅನೇಕ ಪರ್ಯಾಯ ಮಾರ್ಗಗಳಿವೆ. ರಸ್ತೆಗಳ ಸುಧಾರಣೆ, ಸೇತುವೆಗಳು ಹಾಗೂ ಸುರಂಗಗಳ ನಿರ್ಮಾಣ, ಸಾರ್ವಜನಿಕ ಸಾರಿಗೆ ಸುಧಾರಣೆ ಸೇರಿದಂತೆ ನಾನಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ನಾಗರಿಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…