ಬೆಂಗಳೂರು : “ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ” ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭದ ದಿನಾಂಕದ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ವಿಚಾರದ ಬಗ್ಗೆ ಗೊಂದಲ ಬೇಡ. ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರವೇ ಸರ್ಕಾರದ ಆದ್ಯತೆ. ಕೊರೊನಾ ಸಂಪೂರ್ಣವಾಗಿ ನಿವಾರಣೆಯಾಗದೇ ಇರುವ ಕಾರಣ ಪದವಿ ಕಾಲೇಜುಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ” ಎಂದಿದ್ದಾರೆ.
“ರಾಜ್ಯದಲ್ಲಿ ಶೇ.65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿದೆ. ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಇಲ್ಲಿಯವರೆಗೆ 3.13 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. 29,241 ಸಿಬ್ಬಂದಿಗಳಲ್ಲಿ 24,875 ಮಂದಿಗೆ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.
“ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ. ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ಪ್ರಥಮ ಆದ್ಯತೆ. ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಈಗಾಗಲೇ 65% ಲಸಿಕಾಕರಣವಾಗಿದೆ. ಖಾಸಗಿ ಕಾಲೇಜುಗಳಲ್ಲೂ ತ್ವರಿತವಾಗಿ ಲಸಿಕಾಕರಣ ನಡೆಸಲು ಸೂಚಿಸಲಾಗಿದೆ. ಎಲ್ಲರ ಸುರಕ್ಷತೆ ಕಾಪಾಡೋಣ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…