ಉಡುಪಿ ಪೇಜಾವರ ಮಠಾಧೀಶ ವೃಂದಾವನಸ್ಥರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ರಾಷ್ಡ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದು ಇಂದು ಉಡುಪಿಗೆ ಆಗಮಿಸಿದರು. ನಗರದ ಸಂಸ್ಕೃತ ಕಾಲೇಜು ವಠಾರದಿಂದ ಪ್ರಶಸ್ತಿಯನ್ನ ಗೌರವಯುತವಾಗಿ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಲಾಯಿತು. ರಥಬೀದಿಯ ಮೂಲಕ ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಪ್ರಶಸ್ತಿಯನ್ನು ಶ್ರೀಕೃಷ್ಣನ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ರಥಬೀದಿಯಲ್ಲಿ ಒಂದು ಸುತ್ತು ಮೆರವಣಿಗೆ ಮಾಡಿ ವಿಶ್ವೇಶತೀರ್ಥ ಸ್ವಾಮೀಜಿ ಕುಳಿತುಕೊಳ್ಳುತ್ತಿದ್ದ ಪೀಠದಲ್ಲಿ ಪ್ರಶಸ್ತಿಯನ್ನು ಇಟ್ಟು ಆರತಿ ಬೆಳಗಲಾಯ್ತು. ಸ್ವಾಮೀಜಿಗಳು ಪುಷ್ಪಾರ್ಚನೆ ಸಲ್ಲಿಕೆ ಮಾಡಿದರು. ಪರ್ಯಾಯ ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಸ್ವಾಮೀಜಿ ಸೋದೆ ಶ್ರೀ, ಪಲಿಮಾರು ಕಿರಿಯ ಶ್ರೀಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಸಕ ರಘುಪತಿ ಭಟ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಉಡುಪಿಯ ಜನಪ್ರತಿನಿಧಿಗಳು ಅಧಿಕಾರಿಗಳು ಇದ್ದರು. ಜಿಲ್ಲಾ ಆಡಳಿತದ ವತಿಯಿಂದ ಪ್ರಶಸ್ತಿಗೆ ಮತ್ತು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಲಾಯಿತು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…