ಉಡುಪಿ ಪೇಜಾವರ ಮಠಾಧೀಶ ವೃಂದಾವನಸ್ಥರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ರಾಷ್ಡ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದು ಇಂದು ಉಡುಪಿಗೆ ಆಗಮಿಸಿದರು. ನಗರದ ಸಂಸ್ಕೃತ ಕಾಲೇಜು ವಠಾರದಿಂದ ಪ್ರಶಸ್ತಿಯನ್ನ ಗೌರವಯುತವಾಗಿ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಲಾಯಿತು. ರಥಬೀದಿಯ ಮೂಲಕ ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಪ್ರಶಸ್ತಿಯನ್ನು ಶ್ರೀಕೃಷ್ಣನ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ರಥಬೀದಿಯಲ್ಲಿ ಒಂದು ಸುತ್ತು ಮೆರವಣಿಗೆ ಮಾಡಿ ವಿಶ್ವೇಶತೀರ್ಥ ಸ್ವಾಮೀಜಿ ಕುಳಿತುಕೊಳ್ಳುತ್ತಿದ್ದ ಪೀಠದಲ್ಲಿ ಪ್ರಶಸ್ತಿಯನ್ನು ಇಟ್ಟು ಆರತಿ ಬೆಳಗಲಾಯ್ತು. ಸ್ವಾಮೀಜಿಗಳು ಪುಷ್ಪಾರ್ಚನೆ ಸಲ್ಲಿಕೆ ಮಾಡಿದರು. ಪರ್ಯಾಯ ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಸ್ವಾಮೀಜಿ ಸೋದೆ ಶ್ರೀ, ಪಲಿಮಾರು ಕಿರಿಯ ಶ್ರೀಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಸಕ ರಘುಪತಿ ಭಟ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಉಡುಪಿಯ ಜನಪ್ರತಿನಿಧಿಗಳು ಅಧಿಕಾರಿಗಳು ಇದ್ದರು. ಜಿಲ್ಲಾ ಆಡಳಿತದ ವತಿಯಿಂದ ಪ್ರಶಸ್ತಿಗೆ ಮತ್ತು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಲಾಯಿತು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…