ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.
ಏಕಾಂಗಿಯಾಗಿ 7 ಸುರಂಗಗಳನ್ನು ಕೊರೆದು ಕೃಷಿ ಭೂಮಿಗೆ ನೀರು ಹರಿಸಿದ ಮಹಾಲಿಂಗ ನಾಯ್ಕ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇಧಿಗ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡರು. ಈ ವೇಳೆ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿರುವುದು ಎಲ್ಲರ ಗಮನ ಸೆಳೆದಿದೆ.
ಮಹಾಲಿಂಗ ನಾಯ್ಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. 27 ವರ್ಷದ ಮಹಾಲಿಂಗ ನಾಯ್ಕ ಅವರು ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಸುರಂಗ ನೀರಿನ ವ್ಯವಸ್ಥೆಯ ಮೊರೆ ಹೋದರು. ಹೀಗೆ ವಿದ್ಯುತ್ ರಹಿತವಾಗಿ ಗುರುತ್ವದ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಮನೆ ಮಾತಾದರು.
6 ಸುರಂಗ ಕೊರೆದರೂ ಮಹಾಲಿಂಗ ನಾಯ್ಕ ಅವರಿಗೆ ನೀರು ಸಿಕ್ಕಿರಲಿಲ್ಲ. ಆದರೂ ತನ್ನ ಪ್ರಯತ್ನ ಬಿಡದ ಅವರು 7 ಸುರಂಗ ಕೊರೆದೇ ಬಿಟ್ಟರು. ಈ ವೇಳೆ ಅವರ ಪ್ರಯತ್ನ ಯಶಸ್ಸು ದೊರಕಿತ್ತು. ಇದೀಗ ಇವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…