ಮಂಗಳೂರು : ನಗರದಲ್ಲಿ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಾರ್ ಮುಂದೆ ನಡೆದ ಘಟನೆ ಬ್ರಾಂಡ್ ಮಂಗಳೂರಿಗೆ ಹೊಡೆತ ಕೊಟ್ಟಿದೆ. ಸಮಾಜದ್ರೋಹಿ ಶಕ್ತಿಗಳು ಮತ್ತು ದಾರಿ ತಪ್ಪಿದ ಯುವಕರಿಂದ ಕೃತ್ಯವಾಗಿದೆ. ಇದರಿಂದ ಬ್ರಾಂಡ್ ಮಂಗಳೂರು ಗೌರವಕ್ಕೆ ಕಪ್ಪು ಚುಕ್ಕೆಯಾಗಿದೆ. ಇದು ಭವಿಷ್ಯದ ಮಂಗಳೂರಿನ ಅಭಿವೃದ್ಧಿಗೆ ಮಾರಕವಾಗಿದೆ. ಹೀಗಾಗಿ ಇಂಥವರನ್ನ ಪತ್ತೆ ಹಚ್ಚಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದರು.
ಈ ವ್ಯಾಪಾರಸ್ಥರು ಕೋವಿಡ್ ನಿಂದ ನಷ್ಟಕ್ಕೆ ಒಳಗಾಗಿದ್ದಾರೆ. ಟ್ಯಾಕ್ಸ್, ಜಿಎಸ್ ಟಿ ಕಟ್ಟುವ ಜೊತೆ ಈ ರೌಡಿಗಳಿಗೆ ಹಫ್ತಾ ಕೊಡಬೇಕು. ಇದೊಂದು ಇವರ ಹಫ್ತಾ ವಸೂಲಿ ತಂತ್ರ ಅಷ್ಟೇ. ಸರ್ಕಾರ ಇದನ್ನ ಗಮನಿಸಲಿ, ಜನರ ನೆಮ್ಮದಿ ಹಾಳಾಗ್ತಿದೆ. ಈ ಘಟನೆಗಳಿಗೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಪ್ರೇರಣೆಯಾಗಿದೆ. ಸಿಎಂ ಹೇಳಿದ ಆಕ್ಷನ್ ರಿಯಾಕ್ಟನ್ ಹೇಳಿಕೆ ಈ ಯುವಕರ ತಲೆಯಲ್ಲಿ ಇದೆ. ಇದೇ ಕಾರಣದಿಂದಾಗಿ ಇಂತಹ ಕೃತ್ಯಕ್ಕೆ ಕೈಹಾಕುತ್ತಿದ್ದಾರೆ. ಅಲ್ಲಿದ್ದ ಮಕ್ಕಳಿಗೆ ತಂದೆ-ತಾಯಿ ಇದ್ದಾರೆ, ಅದನ್ನ ಕೇಳೋಕೆ ಇವರ್ಯಾರು? ಎಂದು ಖಾದರ್ ಪ್ರಶ್ನಿಸಿದ್ದಾರೆ.
ಸರ್ಕಾರ ಮತ್ತು ಪೊಲೀಸ್ ಇಲಾಖೆ ಇದನ್ನ ಸಮಗ್ರ ತನಿಖೆ ನಡೆಸಲಿ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…