Featured

ಪಬ್ ಮುಂದೆ ನಡೆದ ಘಟನೆ ಭವಿಷ್ಯದ ಮಂಗಳೂರಿನ ಅಭಿವೃದ್ಧಿಗೆ ಮಾರಕವಾಗಿದೆ : ಖಾದರ್ -Vishwanews24

ಪಬ್ ಮುಂದೆ ನಡೆದ ಘಟನೆ ಬ್ರಾಂಡ್ ಮಂಗಳೂರಿಗೆ ಹೊಡೆತ ಕೊಟ್ಟಿದೆ : ಖಾದರ್

ಮಂಗಳೂರು : ನಗರದಲ್ಲಿ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಾರ್ ಮುಂದೆ ನಡೆದ ಘಟನೆ ಬ್ರಾಂಡ್ ಮಂಗಳೂರಿಗೆ ಹೊಡೆತ ಕೊಟ್ಟಿದೆ. ಸಮಾಜದ್ರೋಹಿ ಶಕ್ತಿಗಳು ಮತ್ತು ದಾರಿ ತಪ್ಪಿದ ಯುವಕರಿಂದ ಕೃತ್ಯವಾಗಿದೆ. ಇದರಿಂದ ಬ್ರಾಂಡ್ ಮಂಗಳೂರು ಗೌರವಕ್ಕೆ ಕಪ್ಪು ಚುಕ್ಕೆಯಾಗಿದೆ. ಇದು ಭವಿಷ್ಯದ ಮಂಗಳೂರಿನ ಅಭಿವೃದ್ಧಿಗೆ ಮಾರಕವಾಗಿದೆ. ಹೀಗಾಗಿ ಇಂಥವರನ್ನ ಪತ್ತೆ ಹಚ್ಚಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದರು.

ಈ ವ್ಯಾಪಾರಸ್ಥರು ಕೋವಿಡ್ ನಿಂದ ನಷ್ಟಕ್ಕೆ ಒಳಗಾಗಿದ್ದಾರೆ. ಟ್ಯಾಕ್ಸ್, ಜಿಎಸ್ ಟಿ ಕಟ್ಟುವ ಜೊತೆ ಈ ರೌಡಿಗಳಿಗೆ ಹಫ್ತಾ ಕೊಡಬೇಕು. ಇದೊಂದು ಇವರ ಹಫ್ತಾ ವಸೂಲಿ ತಂತ್ರ ಅಷ್ಟೇ. ಸರ್ಕಾರ ಇದನ್ನ ಗಮನಿಸಲಿ, ಜನರ ನೆಮ್ಮದಿ ಹಾಳಾಗ್ತಿದೆ. ಈ ಘಟನೆಗಳಿಗೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಪ್ರೇರಣೆಯಾಗಿದೆ. ಸಿಎಂ ಹೇಳಿದ ಆಕ್ಷನ್ ರಿಯಾಕ್ಟನ್ ಹೇಳಿಕೆ ಈ ಯುವಕರ ತಲೆಯಲ್ಲಿ ಇದೆ. ಇದೇ ಕಾರಣದಿಂದಾಗಿ ಇಂತಹ ಕೃತ್ಯಕ್ಕೆ ಕೈಹಾಕುತ್ತಿದ್ದಾರೆ. ಅಲ್ಲಿದ್ದ ಮಕ್ಕಳಿಗೆ ತಂದೆ-ತಾಯಿ ಇದ್ದಾರೆ, ಅದನ್ನ ಕೇಳೋಕೆ ಇವರ್ಯಾರು? ಎಂದು ಖಾದರ್ ಪ್ರಶ್ನಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸ್ ಇಲಾಖೆ ಇದನ್ನ ಸಮಗ್ರ ತನಿಖೆ ನಡೆಸಲಿ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago