Featured

‘ಪರಪ್ಪನ ಅಗ್ರಹಾರಕ್ಕೆ ಬೇಕಿದ್ರೆ ಹಾಕಲಿ, ನಾವು ಪ್ರೀತಿಗಷ್ಟೇ ಬಗ್ಗೋದು, ಬೆದರಿಕೆಗಲ್ಲ’: ಡಿಕೆ ಬ್ರದರ್ಸ್ ವಾಗ್ದಾಳಿ

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮ ರಸ್ತೆ ತೋಟದಲ್ಲಿ ನಡೆದ ಕಾರ್ಯಕರ್ತರ ಅಭಿನಂದನಾ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, ಬೇಕಾದರೆ ನಮ್ಮನ್ನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಿ, ಇದಕ್ಕೆಲ್ಲ ಜಗ್ಗಲ್ಲ, ಪ್ರೀತಿ ವಿಶ್ವಾಸಕ್ಕೆ ಬಗ್ಗುತ್ತೇವೆ, ನನ್ನನ್ನ ನನ್ನ ಕುಟುಂಬವನ್ನ ಬೆದರಿಕೆ ಹಾಕಿ ಎದುರಿಸಿ ಗೆಲ್ಲೋಕಾಗಲ್ಲ, ಅದು ನಮ್ಮ ರಕ್ತದಲ್ಲೇ ಇಲ್ಲ ಎಂದಿದ್ದಾರೆ.

ಇದೇವೇಳೆ, ಸಿಎಂ ಕುಮಾರಸ್ವಾಮಿಯವರು ಸಾಲಮನ್ನಾಕ್ಕಾಗಿ ಈಗಾಗಲೇ ಬ್ಯಾಂಕ್ ಮ್ಯಾನೇಜರ್​ಗಳ ಜೊತೆ ಚರ್ಚೆ ನಡೆಸಿದ್ದಾರೆ. ಸೂಕ್ತಕಾಲದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ. ಬಜೆಟ್ ಮುಗಿದ ಬಳಿಕ ಚನ್ನಪಟ್ಟಣದಲ್ಲಿ ಸಭೆ ನಡೆಸುತ್ತೇವೆ, ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನ ಬಿಡುವ ಪ್ರಶ್ನೆಯೇ ಇಲ್ಲ ಅಂದ್ರು.

ಇದೇ ಸಮಾವೇಶದಲ್ಲಿ ಮಾತನಾಡಿದ ಸಂಸದ ಡಿ.ಕೆ ಸುರೇಶ್, ನಿಮಗೆ ಅವಮಾನವಾಗುವಂಥಾ ಕೆಲಸ ನಾವು ಮಾಡಿಲ್ಲ, ಕೇಂದ್ರ ಸರ್ಕಾರದಿಂದ ನನ್ನ ಮೇಲೆ, ಶಿವಕುಮಾರ್ ಮೇಲೆ ಅನೇಕ ರಾಜಕೀಯ ಷಡ್ಯಂತ್ರಗಳು ನಡೆಯುತ್ತೇವೆ ಎಂದಿದ್ದಾರೆ.

ಒಟ್ಟಾರೆ, ಕಾರ್ಯಕರ್ತರ ಅಭಿನಂದನಾ ಸಮಾವೇಶದಲ್ಲಿ ಡಿಕೆ ಸಹೋದರರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜೊತೆಗೆ ಸವಾಲ್ ಕೂಡ ಹಾಕಿದ್ದಾರೆ.

 

Vishwa News 24

Recent Posts

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

3 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

17 minutes ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

20 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

23 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

23 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

23 hours ago