Featured

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ..

ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ ಬಿಟ್ಟಿಲ್ಲ, ಅವರ ವಿರುದ್ದ ಕ್ರಮ :  ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ರೇಡ್ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ರೇಡ್ ಮಾಡಿಸಿದ್ದು ನಾನೇ. ರೇಡ್ ಆಗಬೇಕಾದರೂ ಗೃಹ ಇಲಾಖೆಯ ಅನುಮತಿ ಬೇಕು. ಎರಡು ವಾರದ ಹಿಂದೆ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿದ್ದೆ. ಅಲ್ಲಿ ಕೆಲವು ಲೋಪಗಳಾಗಿದ್ದವು. ಹೀಗಾಗಿ ಮುಖ್ಯಮಂತ್ರಿಗಳ ಅನುಮತಿ ಪಡೆದು ರೇಡ್ ಮಾಡಿಸಿದೆ ಎಂದು ತಿಳಿಸಿದರು.

ಅಧಿಕಾರಿಗಳ ಮಾಹಿತಿ ಮೇರೆಗೆ ರೇಡ್ ಮಾಡಿಸಿದ್ದೇನೆ. ಈ ಅಕ್ರಮಕ್ಕೆ ಸಹಕಾರ ಕೊಟ್ಟ ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: 

ಪರಪ್ಪನ ಅಗ್ರಹಾರ ಮಾತ್ರವಲ್ಲ, ರಾಜ್ಯದ ಎಲ್ಲಾ ಕಾರಾಗೃಹಗಳ ಮೇಲೆಯೂ ಇಂತಹ ಕಾರ್ಯಾಚರಣೆ ನಡೆಯುತ್ತದೆ. ಇದನ್ನು ನಿರಂತರವಾಗಿ ಮಾಡಬೇಕು. ಕೆಲವು ಅಧಿಕಾರಿಗಳು ಇದ್ದಾರೆ, ಅವರು ತಮ್ಮ ಹಳೆ ಚಾಳಿಯನ್ನು ಬಿಟ್ಟಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಇಂತಹ ಕೆಲಸಗಳು ಯಾವಾಗಲೂ ಆಗುತ್ತಿರುತ್ತವೆ, ಹಾಗಂತ ತಕ್ಷಣ ನೇಣಿಗೆ ಹಾಕಲು ಆಗುವುದಿಲ್ಲ. ನಾನು ಖಾತೆ ತೆಗೆದುಕೊಂಡು 2 ತಿಂಗಳಲ್ಲಿ ಇಷ್ಟು ಬೇಗ ರೇಡ್ ಮಾಡಿಸಿ ಕ್ರಮ ಕೈಗೊಂಡಿದ್ದೇನೆ. ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಹಾಗೂ ಸರ್ವೀಸ್ ಡಿಸ್ಮಿಸ್ ಮಾಡಲು ಕೆಲವು ಮಾನದಂಡಗಳಿವೆ, ಅದರ ಪ್ರಕಾರವೇ ನಾವು ಕೆಲಸ ಮಾಡಬೇಕಾಗುತ್ತದೆ ಎಂದರು. ಇದನ್ನೂ ಓದಿ: ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?

ವಿಐಪಿ ಟ್ರೀಟ್‌ಮೆಂಟ್ ಯಾರಿಗೂ ಕೊಡಬಾರದು. ರೇಡ್‌ನಲ್ಲಿ ಏನೇನು ಸಿಕ್ಕಿದೆ ಎಂದು ಇಲ್ಲಿ ಚರ್ಚೆ ಮಾಡಲು ಆಗುವುದಿಲ್ಲ. ಈ ದಾಳಿಯೇ ಅಧಿಕಾರಿಗಳಿಗೆ ಒಂದು ಸೂಚನೆ. ಪ್ರಸ್ತುತ ಮಹಜರು ಪ್ರಕ್ರಿಯೆ ನಡೆಯಬೇಕು, ಅದೆಲ್ಲವೂ ಮುಗಿಯಲಿ. ಈ ವಸ್ತುಗಳು ಯಾರಿಂದ ಒಳಗೆ ಹೋದವು ಮತ್ತು ಯಾರ ಸಹಕಾರವಿತ್ತು ಎಂಬ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು” ಎಂದು ಹೇಳಿದರು.

ಇದನ್ನೂ ಓದಿ: 

“ಜೈಲಿನಲ್ಲಿ ಜಾಮರ್ ಇದೆ, ಆದರೂ ಕೆಲವು ಭಾಗಗಳಲ್ಲಿ ಅದು ಕೆಲಸ ಮಾಡುತ್ತಿಲ್ಲ. ಹೀಗಾಗಿ ಡಿಜಿಟಲ್ ವ್ಯವಸ್ಥೆಯ ಆಡಿಟ್‌ಗೆ ಸೂಚನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

25 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

38 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

4 hours ago