ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಾದ್ಯಂತ ಪರವಾನಿಗೆ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಗಳು ಉಂಟಾಗಿವೆ. ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, ಮನೆ ನಿರ್ಮಾಣಕ್ಕೆ ಸಾಲ ಪಡೆಯುವವರು ಹಾಗೂ ಸಾಮಾನ್ಯ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ :
ರಾಜ್ಯದಾದ್ಯಂತ ಸುಮಾರು 6,000 ಪರವಾನಿಗೆ ಭೂಮಾಪಕರು, ಉಡುಪಿ ಜಿಲ್ಲೆಯಲ್ಲಿ 118 ಮಂದಿ ಹಾಗೂ ಉಡುಪಿ ತಾಲೂಕಿನಲ್ಲಿ 22 ಮುಷ್ಕರದಲ್ಲಿ ನಿರತರಾಗಿದ್ದಾರೆ.
ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಭೂಮಾಪನ ಅರ್ಜಿಗಳ ವಿಲೇವಾರಿ ಬಾಕಿ ಇದ್ದು ವಿಶೇಷವಾಗಿ ಉಡುಪಿ ತಾಲೂಕಿನಲ್ಲಿ 350ಕ್ಕೂ ಅಧಿಕ ಭೂಮಾಪನ ಅರ್ಜಿಗಳು ಬಾಕಿ ಯಾಗಿದೆ.
ರೈತರು, ಜಮೀನು ಖರೀದಿ/ಮಾರಾಟ ಮಾಡುವವರು, ವಾರಸುದಾರಿಕೆ ದಾಖಲೆ ಮಾಡಿಸಿಕೊಳ್ಳುವವರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಆರ್ಥಿಕ ಮತ್ತು ಆಡಳಿತಾತ್ಮಕ ತೊಂದರೆ ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ :
ಆದುದರಿಂದ, ಈ ಗಂಭೀರ ಸಮಸ್ಯೆಯನ್ನು ತಕ್ಷಣ ಪರಿಗಣಿಸಿ ಪರವಾನಿಗೆ ಭೂಮಾಪಕರೊಂದಿಗೆ ಮಾತುಕತೆ ನಡೆಸಿ, ಸದ್ರಿಯವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸಿ, ಮುಷ್ಕರವನ್ನು ಶೀಘ್ರ ಅಂತ್ಯಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೆಯೇ ಸಾರ್ವಜನಿಕ ಹಿತದೃಷ್ಟಿಯಿಂದ ಭೂಮಾಪನ ಸೇವೆಗಳು ಮರುಪ್ರಾರಂಭವಾಗುವಂತೆ ತುರ್ತು ಮಧ್ಯಪ್ರವೇಶ ಮಾಡಿ ಜನರ ಸಂಕಷ್ಟ ನಿವಾರಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…