Featured

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಾದ್ಯಂತ ಪರವಾನಿಗೆ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಗಳು ಉಂಟಾಗಿವೆ. ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, ಮನೆ ನಿರ್ಮಾಣಕ್ಕೆ ಸಾಲ ಪಡೆಯುವವರು ಹಾಗೂ ಸಾಮಾನ್ಯ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ :

ರಾಜ್ಯದಾದ್ಯಂತ ಸುಮಾರು 6,000 ಪರವಾನಿಗೆ ಭೂಮಾಪಕರು, ಉಡುಪಿ ಜಿಲ್ಲೆಯಲ್ಲಿ 118 ಮಂದಿ ಹಾಗೂ ಉಡುಪಿ ತಾಲೂಕಿನಲ್ಲಿ 22 ಮುಷ್ಕರದಲ್ಲಿ ನಿರತರಾಗಿದ್ದಾರೆ.

ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಭೂಮಾಪನ ಅರ್ಜಿಗಳ ವಿಲೇವಾರಿ ಬಾಕಿ ಇದ್ದು ವಿಶೇಷವಾಗಿ ಉಡುಪಿ ತಾಲೂಕಿನಲ್ಲಿ 350ಕ್ಕೂ ಅಧಿಕ ಭೂಮಾಪನ ಅರ್ಜಿಗಳು ಬಾಕಿ ಯಾಗಿದೆ.

ರೈತರು, ಜಮೀನು ಖರೀದಿ/ಮಾರಾಟ ಮಾಡುವವರು, ವಾರಸುದಾರಿಕೆ ದಾಖಲೆ ಮಾಡಿಸಿಕೊಳ್ಳುವವರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಆರ್ಥಿಕ ಮತ್ತು ಆಡಳಿತಾತ್ಮಕ ತೊಂದರೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ :

ಆದುದರಿಂದ, ಈ ಗಂಭೀರ ಸಮಸ್ಯೆಯನ್ನು ತಕ್ಷಣ ಪರಿಗಣಿಸಿ ಪರವಾನಿಗೆ ಭೂಮಾಪಕರೊಂದಿಗೆ ಮಾತುಕತೆ ನಡೆಸಿ, ಸದ್ರಿಯವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸಿ, ಮುಷ್ಕರವನ್ನು ಶೀಘ್ರ ಅಂತ್ಯಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೆಯೇ ಸಾರ್ವಜನಿಕ ಹಿತದೃಷ್ಟಿಯಿಂದ ಭೂಮಾಪನ ಸೇವೆಗಳು ಮರುಪ್ರಾರಂಭವಾಗುವಂತೆ ತುರ್ತು ಮಧ್ಯಪ್ರವೇಶ ಮಾಡಿ ಜನರ ಸಂಕಷ್ಟ ನಿವಾರಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago