ಬೆಂಗಳೂರು : ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.
ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಅಧಿವೇಶನದಲ್ಲಿ ಸುನೀಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…