Featured

ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು : ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ – vishwanews24

ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ

ಬೆಂಗಳೂರು : ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.

ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಧಿವೇಶನದಲ್ಲಿ ಸುನೀಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago