Featured

ಪರಶುರಾಮ ಥೀಮ್ ಪಾರ್ಕ್ ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟ ಕಾಂಗ್ರೆಸ್ : ಶ್ರೀನಿಧಿ ಹೆಗ್ಡೆ – vishwanews24

ಪರಶುರಾಮ ಥೀಮ್ ಪಾರ್ಕ್ ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟ ಕಾಂಗ್ರೆಸ್ : ಶ್ರೀನಿಧಿ ಹೆಗ್ಡೆ – vishwanews24

ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಲಾದ ಪರಶುರಾಮನ ಮೂರ್ತಿ ಫೈಬರ್ ಪ್ರತಿಮೆ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತದ ಬಗೆ ಮಾಧ್ಯಮದಲ್ಲಿ ಪ್ರಕಟವಾಗಿದೆ, ಈ ಮೂಲಕ ರಾಜ್ಯದಾದ್ಯಂತ ಫೈಬರ್ ಪ್ರತಿಮೆ ಎಂದು ಆಧಾರ ರಹಿತ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ಸ್ ನಾಯಕರಿಗೆ ಸ್ಪಷ್ಟ ಸೋಲಾಗಿದೆ.

ಕಾಂಗ್ರೆಸ್ಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕಾರ್ಪಣೆ ಆದ ಪರಶುರಾಮ ಥೀಮ್ ಪಾರ್ಕ್ ಅನ್ನು ಕಾಂಗ್ರೆಸ್ ಪಕ್ಷ ಮಿತಿ ಮಿರಿ ಅಪಪ್ರಚಾರ ಮಾಡುವ ಮೂಲಕ ಕೇವಲ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಇಡೀ ಜಿಲ್ಲೆಗೆ ಪ್ರವಾಸೋದ್ಯಮದಲ್ಲಿ ಹಿನ್ನಡೆ ಉಂಟು ಮಾಡಿದೆ.

ಪ್ರತಿಮೆಯ ಸೊಂಟದ ಮೇಲ್ಭಾಗ ಮರು ವಿನ್ಯಾಸಕ್ಕೆ ತೆಗೆದು ಇಡಲಾಗಿತ್ತು, ಆದರೆ ಇದನ್ನೇ ತನ್ನ ರಾಜಕೀಯ ಬೆಳೆ ಬೇಯಿಸಲು ಬಳಸಿಕೊಂಡು ಕಾಂಗ್ರೆಸ್ ಫೈಬರ್ ಪ್ರತಿಮೆ ಎಂದು ಪ್ರವಾಸೋದ್ಯಮದಲ್ಲಿ ಹೊಸ ಭಾಷ್ಯ ಬರೆಬಹುದಿದ್ದ ಪರಶುರಾಮ ಥೀಮ್ ಪಾರ್ಕ್ ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟಿದ್ದಾರೆ. ಇನ್ನಾದರೂ ರಾಜ್ಯ ಸರ್ಕಾರ ಈ ಯೋಜನೆಗೆ ತಾನು ತಡೆ ಹಿಡಿದಿರುವ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಿ ಥೀಮ್ ಪಾರ್ಕ್ ಯೋಜನೆ ಪೂರ್ಣಗೊಳಿಸಿ ಪ್ರವಾಸೋದ್ಯಮ ಹಾಗೂ ಅಭಿವೃದ್ದಿಗೆ ಅನುವುಮಾಡಬೇಕಾಗಿ ಆಗ್ರಹಿಸುತ್ತೇನೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಅವರು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago