ಉಡುಪಿ

ಪರಶುರಾಮ ಥೀಮ್ ಪಾರ್ಕ್ ನನ್ನ ಕನಸಿನ ಯೋಜನೆ : ಶಾಸಕ ವಿ.ಸುನಿಲ್ ಕುಮಾರ್ – vishwanews24

ಕಾರ್ಕಳದ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಹಾಳು ಮಾಡಿದೆ..

ಅಪಪ್ರಚಾರ ಗಳಿಗೆ ಸೋಲಾಗಿದೆ ವಾದ ವಿವಾದ ಅಗತ್ಯವಿಲ್ಲ : ಶಾಸಕ ವಿ.ಸುನಿಲ್ ಕುಮಾರ್

ಉಡುಪಿ: ಪರಶುರಾಮ ಮೂರ್ತಿ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ನಿರಂತರವಾಗಿ ಮಾಡಿದ ಆರೋಪ ಸುಳ್ಳಾಗಿದೆ..ಚಾರ್ಜ್ ಶೀಟ್ ಮುಖಾಂತರ ಅದು ಸಾಬೀತಾಗಿದೆ..ಸ್ಥಳೀಯ ನಾಯಕರ ಆರೋಪ ಕೇಳಿ ಕಾಂಗ್ರೆಸ್ ರಾಜ್ಯ ನಾಯಕರು ಕೂಡ ಟೀಕಿಸಿದ್ರು..ಕಟ್ಟು ಕಥೆಗಳನ್ನು ಸೃಷ್ಟಿಸುವ ಪ್ರಯತ್ನಗಳಿಗೆ ಸೋಲಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಸರಕಾರ ವಿಪಕ್ಷಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಬಂದಿದೆ..ತನಿಖೆ ನೆಪದಲ್ಲಿ ಟಾರ್ಗೆಟ್ ಮಾಡುವ ಪ್ರಯತ್ನ ಇಡೀ ರಾಜ್ಯದಲ್ಲಿ ನಡೆದಿದೆ..ಪರಶುರಾಮ ಥೀಮ್ ಪಾರ್ಕ್ ನನ್ನ ಕನಸಿನ ಯೋಜನೆ ದಕ್ಷಿಣ ಭಾರತದ ಶ್ರೇಷ್ಠ ಪ್ರವಾಸಿ ತಾಣವಾಗಬೇಕು ಅನ್ನೋದು ಕನಸು..

ಹೊಸ ಪರಿಕಲ್ಪನೆಯೊಂದಿಗೆ ಥೀಮ್ ಪಾರ್ಕ್ ನಿರ್ಮಾಣ ಮಾಡಿದ್ದೆವು.ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ವಿನಾಕಾರಣ ಆರೋಪ ಮಾಡಿದೆ..ಪರಶುರಾಮನ ಮೂರ್ತಿಯನ್ನು ಫೈಬರ್ ಎಂದು ಸುಳ್ಳು ಹೇಳಿದ್ರು..ರಾಜ್ಯಾದ್ಯಂತ ಫೈಬರ್ ಮೂರ್ತಿ ಎಂದು ಪ್ರಚಾರ ಮಾಡಿದ್ರು..ಕಾರ್ಕಳದ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಹಾಳು ಮಾಡಿದೆ..ಗುಣಮಟ್ಟದಲ್ಲಿ ವ್ಯತ್ಯಾಸ ಆಗಿದ್ದರೆ ತನಿಖೆ ಮಾಡಿ ಎಂದು ನಾನು ಹೇಳುತ್ತಲೇ ಬಂದಿದ್ದೆ..ಅಪಪ್ರಚಾರ ಮಾಡಿ ಕಾರ್ಕಳಕ್ಕೆ ಅಪಮಾನ ಮಾಡಬೇಡಿ ಎಂದಿದ್ದೆ..ಒಳ್ಳೆಯ ತನಿಖೆ ಮಾಡಿ ಎಂದು ನಾನು ಸ್ವತಃ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ..ಕಾಂಗ್ರೆಸ್ ಎರಡು ವರ್ಷ ಕಾಲಹರಣ ಮಾಡಿದೆ. ಚಾರ್ಜ್ ಶೀಟ್ ಸಲ್ಲಿಸುವ ಮೂಲಕ ಎಲ್ಲವೂ ಸ್ಪಷ್ಟವಾಗಿದೆ..ಫೈಬರ್ ಅನ್ನುವ ಆರೋಪ ಸುಳ್ಳಾಗಿದೆ..ಫೈಬರ್ ಅಲ್ಲ ಹಿತ್ತಾಳೆ ಅನ್ನೋದನ್ನ ಸ್ಪಷ್ಟ ಮಾಡಿದ್ದಾರೆ..ಅಪಪ್ರಚಾರ ಗಳಿಗೆ ಸೋಲಾಗಿದೆ ವಾದ ವಿವಾದ ಅಗತ್ಯವಿಲ್ಲ..ನಾನು ಲೋಹತಜ್ಞ ಅಲ್ಲ..ಹಿತ್ತಾಳೆ ಕಂಚು ಈ ವಿಚಾರದಲ್ಲಿ ಚರ್ಚೆಗೆ ಹೋಗಲ್ಲ..ಮೊದಲು ಸಿಮೆಂಟ್ ಅಂದ್ರು ಆಮೇಲೆ ಪ್ಲಾಸ್ಟಿಕ್ ಅಂದ್ರು ನಂತರ ಫೈಬರ್ ಅಂದ್ರು,ತನಿಖೆ ಆಗಲಿ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ ಅಂತಾ ಕಾರ್ಕಳ ಶಾಸಕ ಪರಶುರಾಮ ಮೂರ್ತಿ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

13 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago