ಉಡುಪಿ

ಪರಶುರಾಮ ಥೀಮ್ ಪಾರ್ಕ್ ನನ್ನ ಕನಸಿನ ಯೋಜನೆ : ಶಾಸಕ ವಿ.ಸುನಿಲ್ ಕುಮಾರ್ – vishwanews24

ಕಾರ್ಕಳದ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಹಾಳು ಮಾಡಿದೆ..

ಅಪಪ್ರಚಾರ ಗಳಿಗೆ ಸೋಲಾಗಿದೆ ವಾದ ವಿವಾದ ಅಗತ್ಯವಿಲ್ಲ : ಶಾಸಕ ವಿ.ಸುನಿಲ್ ಕುಮಾರ್

ಉಡುಪಿ: ಪರಶುರಾಮ ಮೂರ್ತಿ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ನಿರಂತರವಾಗಿ ಮಾಡಿದ ಆರೋಪ ಸುಳ್ಳಾಗಿದೆ..ಚಾರ್ಜ್ ಶೀಟ್ ಮುಖಾಂತರ ಅದು ಸಾಬೀತಾಗಿದೆ..ಸ್ಥಳೀಯ ನಾಯಕರ ಆರೋಪ ಕೇಳಿ ಕಾಂಗ್ರೆಸ್ ರಾಜ್ಯ ನಾಯಕರು ಕೂಡ ಟೀಕಿಸಿದ್ರು..ಕಟ್ಟು ಕಥೆಗಳನ್ನು ಸೃಷ್ಟಿಸುವ ಪ್ರಯತ್ನಗಳಿಗೆ ಸೋಲಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಸರಕಾರ ವಿಪಕ್ಷಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಬಂದಿದೆ..ತನಿಖೆ ನೆಪದಲ್ಲಿ ಟಾರ್ಗೆಟ್ ಮಾಡುವ ಪ್ರಯತ್ನ ಇಡೀ ರಾಜ್ಯದಲ್ಲಿ ನಡೆದಿದೆ..ಪರಶುರಾಮ ಥೀಮ್ ಪಾರ್ಕ್ ನನ್ನ ಕನಸಿನ ಯೋಜನೆ ದಕ್ಷಿಣ ಭಾರತದ ಶ್ರೇಷ್ಠ ಪ್ರವಾಸಿ ತಾಣವಾಗಬೇಕು ಅನ್ನೋದು ಕನಸು..

ಹೊಸ ಪರಿಕಲ್ಪನೆಯೊಂದಿಗೆ ಥೀಮ್ ಪಾರ್ಕ್ ನಿರ್ಮಾಣ ಮಾಡಿದ್ದೆವು.ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ವಿನಾಕಾರಣ ಆರೋಪ ಮಾಡಿದೆ..ಪರಶುರಾಮನ ಮೂರ್ತಿಯನ್ನು ಫೈಬರ್ ಎಂದು ಸುಳ್ಳು ಹೇಳಿದ್ರು..ರಾಜ್ಯಾದ್ಯಂತ ಫೈಬರ್ ಮೂರ್ತಿ ಎಂದು ಪ್ರಚಾರ ಮಾಡಿದ್ರು..ಕಾರ್ಕಳದ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಹಾಳು ಮಾಡಿದೆ..ಗುಣಮಟ್ಟದಲ್ಲಿ ವ್ಯತ್ಯಾಸ ಆಗಿದ್ದರೆ ತನಿಖೆ ಮಾಡಿ ಎಂದು ನಾನು ಹೇಳುತ್ತಲೇ ಬಂದಿದ್ದೆ..ಅಪಪ್ರಚಾರ ಮಾಡಿ ಕಾರ್ಕಳಕ್ಕೆ ಅಪಮಾನ ಮಾಡಬೇಡಿ ಎಂದಿದ್ದೆ..ಒಳ್ಳೆಯ ತನಿಖೆ ಮಾಡಿ ಎಂದು ನಾನು ಸ್ವತಃ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ..ಕಾಂಗ್ರೆಸ್ ಎರಡು ವರ್ಷ ಕಾಲಹರಣ ಮಾಡಿದೆ. ಚಾರ್ಜ್ ಶೀಟ್ ಸಲ್ಲಿಸುವ ಮೂಲಕ ಎಲ್ಲವೂ ಸ್ಪಷ್ಟವಾಗಿದೆ..ಫೈಬರ್ ಅನ್ನುವ ಆರೋಪ ಸುಳ್ಳಾಗಿದೆ..ಫೈಬರ್ ಅಲ್ಲ ಹಿತ್ತಾಳೆ ಅನ್ನೋದನ್ನ ಸ್ಪಷ್ಟ ಮಾಡಿದ್ದಾರೆ..ಅಪಪ್ರಚಾರ ಗಳಿಗೆ ಸೋಲಾಗಿದೆ ವಾದ ವಿವಾದ ಅಗತ್ಯವಿಲ್ಲ..ನಾನು ಲೋಹತಜ್ಞ ಅಲ್ಲ..ಹಿತ್ತಾಳೆ ಕಂಚು ಈ ವಿಚಾರದಲ್ಲಿ ಚರ್ಚೆಗೆ ಹೋಗಲ್ಲ..ಮೊದಲು ಸಿಮೆಂಟ್ ಅಂದ್ರು ಆಮೇಲೆ ಪ್ಲಾಸ್ಟಿಕ್ ಅಂದ್ರು ನಂತರ ಫೈಬರ್ ಅಂದ್ರು,ತನಿಖೆ ಆಗಲಿ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ ಅಂತಾ ಕಾರ್ಕಳ ಶಾಸಕ ಪರಶುರಾಮ ಮೂರ್ತಿ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

37 minutes ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

56 minutes ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

1 hour ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

1 hour ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

1 hour ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago