ಪರಿಕ್ಕರ್ ಅಂತಿಮ ಯಾತ್ರೆಗೆ ಜನಸಾಗರ : ಅಂತಿಮ ನಮನ ಸಲ್ಲಿಸಲಿರುವ ಪ್ರಧಾನಿ ಮೋದಿ – Vishwanews24
ಪಣಜಿ : ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನೊಂದಿಗೆ ಸತತವಾಗಿ ಹೋರಾಟ ಮಾಡಿ ನಿನ್ನೆ ಕೊನೆಯುಸಿರೆಳಿದ್ದ ಗೋವಾ ಸಿಎಂಮನೋಹರ್ ಪರಿಕ್ಕರ್ ಅವರ ಅಂತಿಮ ಯಾತ್ರೆಯು ಪಣಜಿಯ ನಿವಾಸದಿಂದ ಆರಂಭವಾಗಿದ್ದು, ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೆಂಬಲಿಗರು, ಕಾರ್ಯಕರ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಯಾತ್ರೆಯೂದ್ದಕ್ಕೂ ಸಾಗುತ್ತಿದ್ದು, ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ. ಪಣಜಿಯ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಧ್ಯಾಹ್ನ 1.30 ರ ಸುಮಾರಿಗೆ ಪ್ರಧಾನಿ ಆಗಮಿಸಲಿದ್ದು, ಪರಿಕ್ಕರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.ಸಂಜೆ ಐದು ಗಂಟೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
